Sunday, September 8, 2024
Sunday, September 8, 2024

ಸಂಸ್ಕಾರ ಸಂಸಾರಯುಕ್ತ ಶಿಕ್ಷಣ ಇಂದಿನ ಅಗತ್ಯತೆ: ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ

ಸಂಸ್ಕಾರ ಸಂಸಾರಯುಕ್ತ ಶಿಕ್ಷಣ ಇಂದಿನ ಅಗತ್ಯತೆ: ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ

Date:

ಕುಂದಾಪುರ, ಮೇ 17: ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಅಳೆಯುವುದೆಂದರೆ ಕೇವಲ ಅಂಕಗಳೊಂದೇ ಮಾನದಂಡವಾಗಬಾರದು. ಶಿಕ್ಷಣ ಮುಗಿಸಿ ಹೊರಗೆ ಬಂದ ವಿದ್ಯಾರ್ಥಿಗಳು ತಮ್ಮ ಕೌಟುಂಬಿಕ ಸಾಮಾಜಿಕ ಬದುಕಿನಲ್ಲಿ ಎಷ್ಟು ಸಂಸ್ಕಾರಯುಕ್ತವಾದ ಸಂಸಾರದ ಸಂಬಂಧಗಳನ್ನು ಮೈಗೂಡಿಸಿಕೊಳ್ಳಲು ಸಮರ್ಥರಾಗಿದ್ದಾರೆ ಅನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಗುಣಮಟ್ಟವನ್ನು ಅಳೆಯುವ ಮಾಪನವಾಗಬೇಕು. ಬಹುಮುಖ್ಯವಾಗಿ ಗ್ರಾಮೀಣ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತನ್ನು ಸಮರ್ಥವಾಗಿ ಎದುರಿಸಿ ನಿಲ್ಲಬೇಕಾದರೆ ರೂಢಿಸಿಕೊಳ್ಳಬೇಕಾದ ಮೂರು ಶಕ್ತಿಗಳೆಂದರೆ ಇಚ್ಛಾಶಕ್ತಿ, ಕೌಶಲಾಶಕ್ತಿ, ಸಂವಹನ ಶಕ್ತಿ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯಿಂದ ತೊಡಗಿಸಿಕೊಂಡಾಗ ಮಾತ್ರ ಇಂತಹ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವೆಂದು ಉಡುಪಿ ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಪಟ್ಟರು. ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾರ್ಷಿಕ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಸಭಾಧ್ಯಕ್ಷತೆಯನ್ನು ಕಾಲೇಜಿನ ವಿಶ್ವಸ್ತ ಮಂಡಳಿ ಅಧ್ಯಕ್ಷ ಕೆ. ಜಯಕರ ಶೆಟ್ಟಿ ವಹಿಸಿದ್ದರು. ಕಾಲೇಜಿನ ಸಂಚಾಲಕ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜು ವಿಶ್ವಸ್ತ ಮಂಡಳಿ ಸದಸ್ಯೆ ಅನುಪಮ ಎಸ್ ಶೆಟ್ಟಿ, ಕಾಲೇಜಿನ ಹಳೆ ವಿದ್ಯಾರ್ಥಿ ಅಶೇೂಕ ಪುಾಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಸೇವಾ ಸಹಕಾರಿ ಸಂಘ ಬಸ್ರೂರು, ಪದವಿಪೂರ್ವ ಪ್ರಾಂಶುಪಾಲ ನಾರಾಯಣ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲೆ ಡಾ.ಚಂದ್ರಾವತಿ ಶೆಟ್ಟಿ ವರದಿ ವಾಚಿಸಿದರು. ನಿವೃತ್ತ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ.ಪುರುಷೇೂತ್ತಮ ಬಲ್ಯಾಯರನ್ನು ಸನ್ಮಾನಿಸಲಾಯಿತು. ಇತಿಹಾಸ ವಿಭಾಗದ ಮುಖ್ಯಸ್ಥ ರಾಘವೇಂದ್ರ ಶೆಟ್ಟಿ ವಂದಿಸಿದರು. ಕನ್ನಡ ಉಪನ್ಯಾಸಕಿ ಪ್ರಮೀಳಾ, ಇತಿಹಾಸ ಉಪನ್ಯಾಸಕಿ ಆಶಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಕ್ಕೆ ಶಿಕ್ಷಕರ ಸೇವೆ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ...

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್...

18ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ

ಬೆಳ್ಮಣ್, ಸೆ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮದ್ಯ ಮಾರಾಟ ನಿಷೇಧ

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ...
error: Content is protected !!