Monday, August 31, 2026
Monday, August 31, 2026

ಉಡುಪಿ ರೈಲು ನಿಲ್ದಾಣದಲ್ಲಿ ಮೊಬೈಲ್ ಕಳವು

ಉಡುಪಿ ರೈಲು ನಿಲ್ದಾಣದಲ್ಲಿ ಮೊಬೈಲ್ ಕಳವು

Date:

ಮಣಿಪಾಲ: ವ್ಯಕ್ತಿಯೋರ್ವರು ರೈಲು ನಿಲ್ದಾಣದಲ್ಲಿ ಚಾರ್ಜಿಗಿಟ್ಟ ಮೊಬೈಲ್ ಫೋನ್ ಎಗರಿಸಿಕೊಂಡು ಕಾಲ್ಕಿತ್ತ ಆರೋಪಿಗಳನ್ನು ಪೊಲೀಸರು ಬಲೆ ಬೀಸಿದ್ದಾರೆ.

ಘಟನೆಯ ವಿವರ: ಪಿಂಟೋ ಪೌಲ್ ಇವರು ವ್ಯವಹಾರದ ಕೆಲಸದ ನಿಮಿತ್ತ ಫೆಬ್ರವರಿ 25 ರಂದು ರಾತ್ರಿ ಮುಂಬೈನಿಂದ ಮತ್ಸ್ಯಗಂಧ ರೈಲಿನಲ್ಲಿ ಹೊರಟು ಫೆ. 26 ರಂದು ಬೆಳಿಗ್ಗೆ ಉಡುಪಿ ರೈಲ್ವೇ ನಿಲ್ದಾಣಕ್ಕೆ ಬಂದು ತಲುಪಿ, ಮೂಬೈಲ್ ಪೋನ್ ನನ್ನು ಉಡುಪಿ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ 1 ರ ಬಳಿ ಚಾರ್ಜ ಗೆ ಇಟ್ಟಿದ್ದಾಗ ಸದ್ರಿ ಮೊಬೈಲ್ ಪೋನ್ ನನ್ನು ಬೆಳಿಗ್ಗೆ 7:00 ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ಕಳ್ಳತನ ಮಾಡಿಕೊಂಡು ಓಡಿ ಹೋಗಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಹಾಗೂ ರೈಲ್ವೇ ಪೊಲೀಸರು ಆರೋಪಿಗಳನ್ನು ಹಿಡಿದು ಕಳುವಾದ ಪಿಂಟೋ ಪೌಲ್ ರವರ ಮೊಬೈಲ್ ಪೋನ್ ಸಮೇತ್ ಮಣಿಪಾಲ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿರುತ್ತಾರೆ. ಶಹಾಬುದ್ದಿನ್, ತನ್ವೀರ್ ಅಲಂ ಮೊಬೈಲ್ ಕಳವು ಮಾಡಿದ ಆರೋಪಿಗಳು ಎಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!