Thursday, September 19, 2024
Thursday, September 19, 2024

ಕೃಷಿಕ ಪಾರಂಪಳ್ಳಿ ರಮೇಶ್ ಹೇರ್ಳೆಯವರಿಗೆ ಸನ್ಮಾನ

ಕೃಷಿಕ ಪಾರಂಪಳ್ಳಿ ರಮೇಶ್ ಹೇರ್ಳೆಯವರಿಗೆ ಸನ್ಮಾನ

Date:

ಕೋಟ, ಮೇ 19: ರೈತರ ದುಸ್ಥಿತಿಗೆ ಸರಕಾರದ ಅವೈಜ್ಞಾನಿಕ ನಿಯಮಗಳೇ ಕಾರಣವಾಗಿದೆ. ಕಷ್ಟಪಟ್ಟು ಬೆಳೆದ ಬೆಳೆಗೆ ಬೆಲೆ ನಿರ್ಧರಿಸುವುದು ಎಸಿ ರೋಮ್‌ನಲ್ಲಿ ಕುಳಿತವರು ಎಂದು ಕೋಟತಟ್ಟು ಪಡುಕರೆಯ ಹಿರಿಯ ಕೃಷಿಕ ಶಿವಮೂರ್ತಿ ಕೆ ರೈತ ಸಮುದಾಯದ ನೋವನ್ನು ವ್ಯಕ್ತಪಡಿಸಿದರು. ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ೩೫ನೇ ಮಾಲಿಕೆ ಕಾರ್ಯಕ್ರಮದಲ್ಲಿ ಪಾರಂಪಳ್ಳಿ ರಮೇಶ್ ಹೇರ್ಳೆ ಇವರನ್ನು ಗೌರವಿಸಿ ಮಾತನಾಡಿದರು. ಸರಕಾರ ಮಾಡಬೇಕಾದ ಕಾರ್ಯಕ್ರಮ ಪಂಚವರ್ಣ ಹಾಗೂ ಇತರ ಸಂಸ್ಥೆಗಳು ಹಮ್ಮಿಕೊಂಡಿರುವುದು ಪ್ರಶಂಸನೀಯ ಎಂದರು. ಪಾರಂಪಳ್ಳಿ ಪರಿಸರದ ಹಿರಿಯ ಕೃಷಿಕರಾದ ರಮೇಶ್ ಹೇರ್ಳೆ ದಂಪತಿಗಳನ್ನು ಕೃಷಿ ಪರಿಕರ, ಗಿಡ ನೀಡಿ ಗೌರವಿಸಲಾಯಿತು. ಉಡುಪಿ ಜಿಲ್ಲಾ ಕೃಷಿ ಸಂಘಟನೆಯ ಅಧ್ಯಕ್ಷ ರಾಮಕೃಷ್ಣ ಶರ್ಮ ಕೃಷಿ ಪದ್ದತಿಯ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯೆ ಅನುಸೂಯ ಹೇರ್ಳೆ, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಜಯರಾಮ್ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಾರಂಪಳ್ಳಿ ಪ್ರಗತಿಪರ ಕೃಷಿಕ ರಘು ಮಧ್ಯಸ್ಥ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಮಾಜಿ ಅಧ್ಯಕ್ಷೆ ಜಾನ್ಹವಿ ಹೇರ್ಳೆ, ವನೀತಾ ಉಪಾಧ್ಯ, ಮಹಿಳಾ ವೇದಿಕೆ ಸಾಲಿಗ್ರಾಮ ಇದರ ಭಾರತಿ ಹೇರ್ಳೆ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸ್ನೇಹಕೂಟ ಮಣೂರು ಅಧ್ಯಕ್ಷೆ ಭಾರತಿ ವಿ ಮಯ್ಯ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ, ಸನ್ಮಾನ ಪತ್ರವನ್ನು ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ ಹಂದಟ್ಟು ವಾಚಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಪ್ರಾಸ್ತಾವಿಕವಾಗಿ ಮಾತನಾಡಿ ನಿರೂಪಿಸಿದರು. ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!