Wednesday, February 26, 2025
Wednesday, February 26, 2025

ಕಾಪು ತಾಲೂಕು ಎನ್.ಆರ್. ಎಲ್.ಎಮ್ ಸಂಜೀವಿನಿ ಪ್ರಗತಿ ಪರಿಶೀಲನಾ ಸಭೆ

ಕಾಪು ತಾಲೂಕು ಎನ್.ಆರ್. ಎಲ್.ಎಮ್ ಸಂಜೀವಿನಿ ಪ್ರಗತಿ ಪರಿಶೀಲನಾ ಸಭೆ

Date:

ಕಾಪು, ಮೇ 20: ಯೋಜನಾ ನಿರ್ದೇಶಕರಾದ ಕರೀಂ ಅಸಾದಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಾಲೂಕಿನ ಎನ್.ಆರ್. ಎಲ್.ಎಮ್ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಪಶು ಸಖಿ, ಕೃಷಿ ಸಖಿ,ಬಿ. ಸಿ ಸಖಿ ಹಾಗೂ ಆರ್ಥಿಕ ಸಾಕ್ಷರತಾ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಪ್ರಗತಿ ಪರಿಶೀಲನೆ ಸಭೆಯು ಜರಗಿತು.

ಎನ್.ಆರ್. ಎಲ್.ಎಮ್ ಯೋಜನೆಗೆ ಸಂಬಂಧಪಟ್ಟಂತೆ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಲೋಕೋಸ್ ತಂತ್ರಾಂಶದಲ್ಲಿ ಎಸ್.ಎಚ್.ಜಿ ಪ್ರೊಫೈಲ್ ಎಂಟ್ರಿ, ಹೊಸ ಸ್ವ- ಸಹಾಯ ಸಂಘ ರಚನೆ, ಒಕ್ಕೂಟಗಳ ದಾಖಲಾತಿ ನಿರ್ವಹಣೆ, ಮಹಿಳಾ ಕಿಸಾನ್ ಉತ್ಪಾದಕರ ಕಂಪನಿ ಶೇರ್ ಕಲೆಕ್ಷನ್, ಘನ ತ್ಯಾಜ್ಯ ನಿರ್ವಹಣೆ ಕುರಿತು ಒಕ್ಕೂಟಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.

ಕಾಪು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಎಲ್ ಮೋಹನ್ ಕುಮಾರ್ ಸಂಜೀವಿನಿ ಯೋಜನೆಯನ್ನು ಒಳ್ಳೆಯ ರೀತಿಯಲ್ಲಿ ನಡೆಸಿಕೊಂಡು ಹೋಗುವಂತೆ ತಿಳಿಸಿ, ತಮ್ಮ ಸಂಪೂರ್ಣ ಸಹಕಾರ ಇದೆ ಎಂದು ತಿಳಿಸಿದರು. ಸಹಾಯಕ ನಿರ್ದೇಶಕರಾದ ಜೇಮ್ಸ್ ಡಿ’ಸಿಲ್ವ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳು ಹಂತ ಹಂತವಾಗಿ ಸಾಧನೆ ಮಾಡುವಂತೆ ತಿಳಿಸಿದರು. ಸಮಸ್ಯೆ ಇರುವ ಜಿ.ಪಿ.ಎಲ್.ಎಫ್ ಗಳಿಗೆ ಭೇಟಿ ನೀಡುವಂತೆ ಎನ್.ಆರ್. ಎಲ್.ಎಮ್ ಸಿಬ್ಬಂದಿಯವರಿಗೆ ತಿಳಿಸಿದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ನವ್ಯಾ ಎಂ.ಬಿ.ಕೆ., ಎಲ್.ಸಿ.ಆರ್.ಪಿ ಕಾರ್ಯವ್ಯೆಖರಿಯ ಬಗ್ಗೆ ತಿಳಿಸಿದರು. ಯುವ ವೃತ್ತಿಪರ ಸಮಂತ್ ಲೋಕೋಸ್ ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು. ತಾಲೂಕು ವ್ಯವಸ್ಥಾಪಕಿ ಸವಿತಾ, ಅಶ್ವಿನಿ, ಸುಮಿತ್ರಾ, ಲಕ್ಷ್ಮೀ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!