Sunday, February 23, 2025
Sunday, February 23, 2025

ಮಣಿಪಾಲ- ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಸಹಾಯಹಸ್ತ ನೀಡುವ ಪ್ರತಿಷ್ಠಾನಗಳಿಗೆ ಸನ್ಮಾನ

ಮಣಿಪಾಲ- ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಸಹಾಯಹಸ್ತ ನೀಡುವ ಪ್ರತಿಷ್ಠಾನಗಳಿಗೆ ಸನ್ಮಾನ

Date:

ಮಣಿಪಾಲ: ಸರಿಯಾದ ಸಮಯದಲ್ಲಿ ಸರಿಯಾದ ತಂಡದಿಂದ ಸರಿಯಾದ ಚಿಕಿತ್ಸೆ ನೀಡಿದರೆ ಬಾಲ್ಯದ ಕ್ಯಾನ್ಸರ್ ಕಾಯಿಲೆಯು ಹೆಚ್ಚು ಗುಣಪಡಿಸಲ್ಪಡುತ್ತವೆ. ಚಿಕಿತ್ಸೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು, ಅರ್ಜುನ್ ಭಂಡಾರ್ಕರ್ ಸ್ಥಾಪಿಸಿದ ಸೇವ್ ಲೈಫ್ ಚಾರಿಟಬಲ್ ಟ್ರಸ್ಟ್ ಮತ್ತು ಅಮಿತಾ ಪೈ ಸ್ಥಾಪಿಸಿದ ಒನ್ ಗುಡ್ ಸ್ಟೆಪ್ ಫೌಂಡೇಶನ್ ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗಕ್ಕೆ ಬರುವ ಮಕ್ಕಳಿಗೆ ಹಣಕಾಸಿನ ನೆರವು ನೀಡಲು ಪಟ್ಟುಬಿಡದೆ ಕೆಲಸ ಮಾಡುತ್ತಿದೆ.

ಅವರ ನಿಸ್ವಾರ್ಥ ಸೇವೆ ಮತ್ತು ಪ್ರಯತ್ನಗಳನ್ನು ಶ್ಲಾಘಿಸಲು ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನದ ಆಚರಣೆಯ ಸಂದರ್ಭದಲ್ಲಿ ಇವರಿಬ್ಬರನ್ನು ಸನ್ಮಾನಿಸಲಾಯಿತು.

ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ಮುಖ್ಯಸ್ಥರಾದ ಡಾ. ವಾಸುದೇವ ಭಟ್ ಕೆ ಮಾತನಾಡುತ್ತಾ, ಕ್ಯಾನ್ಸರ್ ಹೊಂದಿರುವ ಮಕ್ಕಳಲ್ಲಿ ಸಮಗ್ರ ಚಿಕಿತ್ಸಾ ವಿಧಾನದೊಂದಿಗೆ ಗರಿಷ್ಠ ಯಶಸ್ಸು ಸಾಧಿಸಲು ಬಹಳಷ್ಟು ಸಮಾನಮನಸ್ಕರು ಒಟ್ಟಿಗೆ ಕೆಲಸ ಮಾಡಬೇಕು. ಇದರಲ್ಲಿ ಸರ್ಕಾರೇತರ ಸೇವಾ ಸಂಸ್ಥೆಗಳ ಪಾಲು ದೊಡ್ಡದಿದೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಕೆಎಂಸಿ ಡೀನ್ ಡಾ.ಶರತ್ ಕುಮಾರ್ ರಾವ್ ಅವರು, ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಸಮಗ್ರ ಚಿಕಿತ್ಸೆ ನೀಡುವ ಕೆಲವೇ ಕೇಂದ್ರಗಳು ಭಾರತದಲ್ಲಿದ್ದು, ಅದರಲ್ಲಿ ಮಣಿಪಾಲವು ಒಂದಾಗಿದೆ ಎಂದರು.  

ಕ್ಯಾನ್ಸರ್ ಪೀಡಿತರಿಗೆ ಮತ್ತು ಅವರ ಆರೈಕೆದಾರರಿಗೆ ಯಾವುದೇ ಶುಲ್ಕವಿಲ್ಲದೆ ವಸತಿ ಸೌಲಭ್ಯ ನೀಡುವ ಮುಂಬರುವ ಯೋಜನೆ ಬಗ್ಗೆ ಅವರು ಮಾತನಾಡಿದರು.

ಸನ್ಮಾನ ಕಾರ್ಯಕ್ರಮದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ ಶೆಟ್ಟಿ ಮತ್ತು ನರ್ಸಿಂಗ್ ಸೇವೆಗಳ ಮಖ್ಯಸ್ಥರಾದ ಡಾ.ಪಿ.ಸುಬಾ ಸೂರಿಯಾ ಉಪಸ್ಥಿತರಿದ್ದು, ಈ ಎರಡು ಪ್ರತಿಷ್ಠಾನಗಳ ಪ್ರಯತ್ನವನ್ನು ಶ್ಲಾಘಿಸಿದರು.

ಸನ್ಮಾನದ ನಂತರ ನಡೆದ ಮನರಂಜನಾ ಕಾರ್ಯಕ್ರಮದಲ್ಲಿ ಚಿತ್ರಕಲೆ ಸ್ಪರ್ಧೆ, ಮಕ್ಕಳು ಮತ್ತು ಅವರ ಆರೈಕೆ ಮಾಡುವವರಿಗೆ ರೀಲ್ಸ್ ಸ್ಪರ್ಧೆ ಮತ್ತು ದಾದಿಯರಿಗೆ ಪೋಸ್ಟರ್ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ಸಹಾಯಕ ಪ್ರಾಧ್ಯಾಪಕರುಗಳಾದ ಡಾ. ಅರ್ಚನಾ ಎಂ ವಿ ಸ್ವಾಗತಿಸಿ, ಡಾ ವಿನಯ್ ಎಂ ವಿ  ಅತಿಥಿಗಳನ್ನು ಪರಿಚಯಿಸಿದರು. ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿಯ ಫೆಲೋ ಡಾ. ಚಂದನಾ ಪೈ ಕಾರ್ಯಕ್ರಮ ನಿರೂಪಿಸಿದರು. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!