Sunday, August 30, 2026
Sunday, August 30, 2026

ಮಾ. 6- ಜ| ಬಿಪಿನ್ ರಾವತ್ ಕೃತಿ ಲೋಕಾರ್ಪಣೆ

ಮಾ. 6- ಜ| ಬಿಪಿನ್ ರಾವತ್ ಕೃತಿ ಲೋಕಾರ್ಪಣೆ

Date:

ಕುಂದಾಪುರ: ಭಾರತೀಯ ಸೇನೆಯನ್ನು ಸ್ವಾವಲಂಬಿ ಮತ್ತು ಶಕ್ತಿಶಾಲಿಯಾಗಿಸಲು ಸೇವಾಕಾಲದುದ್ದಕ್ಕೂ ಶ್ರಮಿಸುತ್ತಾ ಕಳೆದ ವರ್ಷ ಡಿ.8 ರಂದು ಹೆಲಿಕಾಪ್ಟರ್ ದುರ್ಘಟನೆಯಲ್ಲಿ ವಿಧಿವಶರಾದ ಪದ್ಮವಿಭೂಷಣ ಸಿಡಿಎಸ್ ಜ. ಬಿಪಿನ್ ರಾವತ್ ಅವರ ಪ್ರೇರಣಾದಾಯಿ ವ್ಯಕ್ತಿತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ದೃಷ್ಟಿಯಿಂದ ಮಾಜಿ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡರು `ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್` ಕೃತಿ ರಚಿಸಿರುತ್ತಾರೆ.

ಮಂಗಳೂರಿನ ಅವನಿ ಪ್ರಕಾಶನ ಕೃತಿಯನ್ನು ಹೊರತಂದಿದೆ. ಕೃತಿ ಲೋಕಾರ್ಪಣೆ ಸಮಾರಂಭವು ಭಾನುವಾರ ಮಾರ್ಚ್ 6 ರಂದು ಸಂಜೆ ಘಂಟೆ 3.30 ಕ್ಕೆ ರೈತಸಿರಿ ಸಭಾಭವನ, ಉಪ್ಪುಂದದಲ್ಲಿ ನಡೆಯಲಿದೆ. ಕರ್ನಲ್ (ನಿವೃತ್ತ) ನಿಟ್ಟೆಗುತ್ತು ಶರತ್ ಭಂಡಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.

ಖಂಬದಕೋಣೆ ರೈ. ಸೇ. ಸ. ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಕೃತಿ ಲೋಕಾರ್ಪಣೆ ಮಾಡಲಿರುವರು. ಕುಂದಾಪುರ ಕಸಾಪ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ಕೃತಿ ಪರಿಚಯ ಮಾಡಲಿರುವರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಅಡಿಗರು ಅಧ್ಯಕ್ಷತೆ ವಹಿಸಲಿರುವರು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!