Home ಸುದ್ಧಿಗಳು ಪ್ರಾದೇಶಿಕ ಶಾಸಕ ಹರೀಶ್ ಪೂಂಜಾ ಬಂಧನ ಯತ್ನ- ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ

ಶಾಸಕ ಹರೀಶ್ ಪೂಂಜಾ ಬಂಧನ ಯತ್ನ- ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ

127
0

ಉಡುಪಿ, ಮೇ 23: ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಬೆಳ್ತಂಗಡಿ ಶಾಸಕ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜಾ ಅವರ ವಿರುದ್ದ ದಾಖಲಾದ ಎಫ್.ಐ.ಆರ್ ವಿರುದ್ದ ಬ್ರಹತ್ ಪ್ರತಿಭಟನೆ ಅಜ್ಜರಕಾಡು ಹುತಾತ್ಮ ಯೋಧರ ಸ್ಮಾರಕದ ಎದುರು ನಡೆಯಿತು. ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮಾತನಾಡಿ, ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸುಗಳನ್ನು ದಾಖಲಿಸಲಾಗುತ್ತಿದೆ. ಮುಂದೆ ಇಂತಹ ಘಟನೆ ನಡೆದಲ್ಲಿ ಯುವಮೋರ್ಚಾ ರಸ್ತೆಗಿಳಿದು ಹೋರಾಟ ನಡೆಸಲಿದೆ ಎಂದರು, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ಶಣೈ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ಉಪಾಧ್ಯಕ್ಷರಾದ ಸಚಿನ್, ಪ್ರಸಾದ್ ಬಿಲ್ಲವ, ಅರ್ಜುನ್ ಪ್ರಭು, ಯುವಮೋರ್ಚಾ ಮಂಡಲ ಅಧ್ಯಕ್ಷರುಗಳಾದ ಕಿರಣ್ ಪೂಜಾರಿ ತೆಕ್ಕಟ್ಟೆ, ಗಜೇಂದ್ರ ಎಸ್ ,ಬಿ., ಸೋನು ಪೂಜಾರಿ ಪಾಂಗಳ, ಶ್ರೀವತ್ಸ ಉಡುಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಪ್ರದೀಪ್ ಕುಂದರ್, ಪ್ರವೀಣ್ ಸೋಮಯ್ಯ, ಮಹಿಳಾ ಮೋರ್ಚಾ ಪ್ರಮುಖರಾದ ನಳಿನಿ ಪ್ರದೀಪ್, ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಶೆಟ್ಟಿ, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ ವಿವಿಧ ಮಂಡಲದ ಯುವಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.