Monday, February 24, 2025
Monday, February 24, 2025

ತೆಕ್ಕಟ್ಟೆ: ಶಿಕ್ಷಕರಿಗೆ ವಿಷಯಾಧಾರಿತ ಪುನಶ್ಚೇತನ ಕಾರ್ಯಾಗಾರ

ತೆಕ್ಕಟ್ಟೆ: ಶಿಕ್ಷಕರಿಗೆ ವಿಷಯಾಧಾರಿತ ಪುನಶ್ಚೇತನ ಕಾರ್ಯಾಗಾರ

Date:

ಉಡುಪಿ, ಮೇ 27: ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಸಹಯೋಗದೊಂದಿಗೆ
ಸೇವಾ ಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆ ಆಶ್ರಯದಲ್ಲಿ ಶಿಕ್ಷಕರಿಗೆ ವಿಷಯಧಾರಿತ ಪುನಶ್ಚೇತನ ಕಾರ್ಯಗಾರ ಹ್ಯಾಪಿ ಲರ್ನಿಂಗ್ ತರಗತಿ ಸಂವಹನ ಕಾರ್ಯಗಾರ ಸೇವಾಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸೇವಾ ಸಂಗಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಅಧ್ಯಕ್ಷ ಸುರೇಶ ಬೆಟ್ಟಿನ್ ವಹಿಸಿದ್ದರು. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಅಧ್ಯಕ್ಷ ಪಾಂಡುರಂಗ ಪೈ ಸಿದ್ದಾಪುರ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ವೇದಿಕೆಯಲ್ಲಿ ಸೇವಾ ಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆಯ ಗೌರವಾಧ್ಯಕ್ಷ ಸಂಜೀವ ಗುಂಡ್ಮಿ, ಸೇವಾ ಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆಯ ಕಾರ್ಯದರ್ಶಿ ಕಮಲಾಕ್ಷ ಪೈ, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಕಾರ್ಯದರ್ಶಿ ಮಹೇಶ್ ಹೈಕಾಡಿ, ಸೇವಾ ಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆಯ ಮುಖ್ಯೋಪಾಧ್ಯಾಯ ವಿಷ್ಣುಮೂರ್ತಿ ಭಟ್, ಸೇವಾ ಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆ ಉಪಾಧ್ಯಕ್ಷ ಅರುಣ ಕುಮಾರ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ಒಟ್ಟು 115 ಶಿಕ್ಷಕರು ಕಾರ್ಯಗಾರದಲ್ಲಿ ಭಾಗವಹಿಸಿದರು. ಸಂಪನ್ಮೂಲ ವ್ಯಕ್ತಿ ರಾಜೇಂದ್ರ ಭಟ್ ಕಾರ್ಕಳ ಇವರು ಮೂರು ಅವಧಿಗಳಲ್ಲಿ ತರಗತಿ ಸಂವಹನ ಸಂಬಂಧಿಸಿದ ವಿಚಾರಗಳನ್ನು ಚಟುವಟಿಕೆ ಆಧಾರಿತ ರೂಪದಲ್ಲಿ ತರಬೇತಿಯನ್ನು ನೀಡಿದರು. ಸೇವಾ ಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆಯ ಮಾತಾಜಿ ಸಂಧ್ಯಾ ಭಟ್ ವಂದಿಸಿದರು. ಶಕೀಲಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!