Friday, October 25, 2024
Friday, October 25, 2024

ಅಕ್ರಮ ಹೋಟೆಲ್ ಕಟ್ಟಡ ವಾರದೊಳಗೆ ತೆರವಿಗೆ ಕ್ರಮ ಕೈಗೊಳ್ಳಿ: ಯಶ್ಪಾಲ್ ಸುವರ್ಣ ಆಗ್ರಹ

ಅಕ್ರಮ ಹೋಟೆಲ್ ಕಟ್ಟಡ ವಾರದೊಳಗೆ ತೆರವಿಗೆ ಕ್ರಮ ಕೈಗೊಳ್ಳಿ: ಯಶ್ಪಾಲ್ ಸುವರ್ಣ ಆಗ್ರಹ

Date:

ಉಡುಪಿ, ಮೇ 27: ಉಡುಪಿ ನಗರಸಭೆ ವ್ಯಾಪ್ತಿಯ ಹೋಟೆಲ್ ಝಾರಾ ಸಹಿತ ಹಲವಾರು ಅಕ್ರಮ ಕಟ್ಟಡಗಳು ನಿಯಮಾವಳಿಗಳನ್ನು ಗಾಳಿಗೆ ತೂರಿ ನಿರ್ಮಾಣಗೊಂಡ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ನಗರಸಭೆ ಅಧಿಕಾರಿಗಳು ತಕ್ಷಣ ಈ ಬಗ್ಗೆ ಕ್ರಮ ವಹಿಸಿ ವಾರದೊಳಗೆ ಕಟ್ಟಡಗಳ ತೆರವಿಗೆ ಮುಂದಾಗುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಸಿಟಿ ಬಸ್ ಸ್ಟ್ಯಾಂಡ್ ಬಳಿಯ ಅಂಜುಮಾನ್ ರಸ್ತೆಯ ಝಾರಾ ಹೋಟೆಲ್ 2 ವರ್ಷದ ಹಿಂದೆ ನಗರಸಭೆ ತೆರವುಗೊಳಿಸಿದ್ದ ಜಾಗದಲ್ಲಿಯೇ ಮತ್ತೆ ಅದೇ ಹೋಟೆಲ್ ಅಕ್ರಮವಾಗಿ ತಲೆ ಎತ್ತಿದೆ. ರಸ್ತೆ ಸಂಚಾರಕ್ಕೆ ತೊಡಕಾಗುವಂತೆ ಅಕ್ರಮವಾಗಿ ಕಟ್ಟಡ ನಿರ್ಮಿಸಿರುವ ಬಗ್ಗೆ ನಗರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದು, ಈ ಕಟ್ಟಡಕ್ಕೆ ನೀಡಿರುವ ಕಾನೂನು ಮೀರಿ ನೀಡಿರುವ ಅನುಮತಿಯನ್ನು ರದ್ದುಮಾಡಿ ತೆರವುಗೊಳಿಸುವಂತೆ ಈಗಾಗಲೇ ನಗರಸಭೆಗೆ ದೂರುಗಳು ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಕಳೆದ ವರ್ಷದ ಏಪ್ರಿಲ್ ತಿಂಗಳಿನಿಂದ ನಗರಸಭೆಯಲ್ಲಿ ಕೌನ್ಸಿಲ್ ಅಸ್ತಿತ್ವದಲ್ಲಿಲ್ಲದ ಕಾರಣ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಈ ಅವಧಿಯಲ್ಲಿ ಅಧಿಕಾರಿಗಳು ರಾಜಾರೋಷವಾಗಿ ಅಕ್ರಮ ಕಟ್ಟಡಗಳಿಗೆ ಸಹಕಾರ ನೀಡುತ್ತಿದ್ದಾ ಎಂಬ ಆರೋಪ ನಿರಂತರವಾಗಿ ಕೇಳಿ ಬರುತ್ತಿದೆ. ನಗರಸಭೆಯ ವ್ಯಾಪ್ತಿಯ ಅಕ್ರಮ ಕಟ್ಟಡಗಳ ಬಗ್ಗೆ ಈ ನಿರ್ಲಕ್ಷ ಧೋರಣೆ ಹಾಗೂ ಪರೋಕ್ಷ ಸಹಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಾರದೊಳಗೆ ಈ ಅಕ್ರಮ ಹೋಟೆಲ್ ಕಟ್ಟಡಗಳ ತೆರವಿಗೆ ಮುಂದಾಗದಿದ್ದಲ್ಲಿ, ಸಾರ್ವಜನಿಕರು ಹಾಗೂ ಕಾರ್ಯಕರ್ತರೊಂದಿಗೆ ಈ ಕಟ್ಟಡಗಳ ವಿರುದ್ಧ ಪ್ರತಿಭಟನೆ ನಡೆಸಿ ತೆರವಿಗೆ ಮುಂದಾಗುವ ಸನ್ನಿವೇಶ ಸೃಷ್ಟಿಯಾದರೆ ಮುಂದಿನ ಎಲ್ಲಾ ಬೆಳವಣಿಗೆಗಳಿಗೆ ನಗರಸಭೆ ಪೌರಾಯುಕ್ತರೇ ಹೊಣೆಯಾಗಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಲಕ್ಷ್ಮಣ ಕುಡ್ವ ಪಿ. ಇವರಿಗೆ ಪಿ.ಎಚ್‌ಡಿ

ಉಡುಪಿ, ಅ.25: ಲಕ್ಷ್ಮಣ ಕುಡ್ವ ಪಿ. ಅವರು ಡಾ. ಗೋಪಿನಾಥ ನಾಯಕ್...

ಗೀತಾ ಯೋಗ ಸಂಗಮ: ಪುತ್ತಿಗೆ ಶ್ರೀ

ಉಡುಪಿ, ಅ.25: ಭಗವದ್ಗೀತೆಯಲ್ಲಿ‌ ಕೃಷ್ಣ ಹೇಳಿದ ಯೋಗಸೂತ್ರಗಳನ್ನು ಅರ್ಜುನನಂತೆ ಬಾಬಾ ರಾಮ್...

ಸಂಶೋಧನೆ ಶ್ರಮದ ಫಲ: ಡಾ ಭಟ್

ಮೂಡುಬಿದಿರೆ, ಅ.25: ಸಂಶೋಧನೆ ಮಾನಸಿಕ ಸದೃಢತೆ, ಶ್ರಮ, ಅಧ್ಯಯನ, ತರ್ಕ, ತಾರ್ಕಿಕ...

ಅ.26: ಸ್ವಯಂಪ್ರೇರಿತ ರಕ್ತದಾನ ಶಿಬಿರ

ಉಡುಪಿ, ಅ.24: ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ರೆಡ್‌ಕ್ರಾಸ್ ಮತ್ತು ರಾಷ್ಟ್ರೀಯ...
error: Content is protected !!