Friday, October 25, 2024
Friday, October 25, 2024

ಮತ ಎಣಿಕೆ: ಉಡುಪಿಯ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ

ಮತ ಎಣಿಕೆ: ಉಡುಪಿಯ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ

Date:

ಉಡುಪಿ, ಮೇ 29: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ-2024 ರ ಮತ ಎಣಿಕಾ ಕಾರ್ಯವು ಜೂನ್ 4 ರಂದು ಉಡುಪಿಯ ಅಜ್ಜರಕಾಡು ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿರುವ ಹಿನ್ನೆಲೆ, ಅಂದು ಬೆಳಗ್ಗೆ 5 ಗಂಟೆಯಿಂದ ಮತ ಎಣಿಕೆ ಮುಗಿಯುವ ವರೆಗೆ ಸದ್ರಿ ರಸ್ತೆಯಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ಈ ಕೆಳಗಿನಂತೆ ಮಾರ್ಪಾಡುಗಳನ್ನು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಜೂನ್ 4 ರಂದು ಬ್ರಹ್ಮಗಿರಿ ಜಂಕ್ಷನ್‌ನಿಂದ ನಾಯಕ್ ಕ್ಯಾಂಟೀನ್ ವರೆಗಿನ ಮತ್ತು ಅಜ್ಜರಕಾಡು ಜಂಕ್ಷನ್‌ನಿಂದ ಸುದರ್ಶನ್ ರೆಸಿಡೆನ್ಸಿ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಬೇಕು.

ಮತ ಎಣಿಕೆಯ ಸಂಬಂಧ ಸರಕಾರಿ ಅಧಿಕಾರಿಗಳ ವಾಹನಗಳ ಪಾರ್ಕಿಂಗ್ ದೃಷ್ಠಿಯಿಂದ ಜೂನ್ 4 ರಂದು ಬ್ರಹ್ಮಗಿರಿ ಜಂಕ್ಷನ್‌ನಿಂದ ಅಜ್ಜರಕಾಡು ಜಂಕ್ಷನ್ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಹಾಗೂ ಅಜ್ಜರಕಾಡು ಜಂಕ್ಷನ್‌ನಿಂದ ಬ್ರಹ್ಮಗಿರಿ ಜಂಕ್ಷನ್ ವರೆಗಿನ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಬದಲಾಯಿಸಿದೆ. ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ನಿಯಮ 1989 ರ ನಿಯಮ 221 (5)(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಈ ಆದೇಶವನ್ನು ಹೊರಡಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ಯಾಜ್ಯ ನಿರ್ವಹಣೆಯಲ್ಲಿ ನಗರಸಭೆಯೊಂದಿಗೆ ಸಹಕರಿಸಿ

ಉಡುಪಿ, ಅ.25: ಉಡುಪಿ ನಗರಸಭೆಯು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿವಿಧ...

ಕಟ್ಟಡಗಳ ಭಗ್ನ ಅವಶೇಷಗಳನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಲು ಸೂಚನೆ

ಉಡುಪಿ, ಅ.25: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಎಲ್ಲೆಂದರಲ್ಲಿ...

ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ಉಡುಪಿ, ಅ.25: ರಾಜ್ಯ ಸರ್ಕಾರದ ಆದೇಶದಂತೆ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಾ...

ಅ.26: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ವತಿಯಿಂದ ಜಾಗೃತಿ ನಡಿಗೆ

ಉಡುಪಿ, ಅ.25: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ವತಿಯಿಂದ ಉಪಶಾಮಾಕ ಆರೈಕೆ ದಿನದ...
error: Content is protected !!