Friday, June 19, 2026
Friday, June 19, 2026

ಹಂಗಾರಕಟ್ಟೆ- ರಾಷ್ಟ್ರೀಯ ವಿಜ್ಞಾನ ದಿನ

ಹಂಗಾರಕಟ್ಟೆ- ರಾಷ್ಟ್ರೀಯ ವಿಜ್ಞಾನ ದಿನ

Date:

ಕೋಟ: ಜಗತ್ತಿಗೆ ವಿಜ್ಞಾನದ ಮಾದರಿಯನ್ನು ಸಿ ವಿ ರಾಮನ್ ಮೂಲಕ ಪರಿಚಯಿಸುದ ಹೆಗ್ಗಳಿಕೆ ನನ್ಮ ಭಾರತದ್ದು ಎಂದು ಮಾಬುಕಳದ ಚೇತನ ಪ್ರೌಢಶಾಲಾ ಮುಖ್ಯ ಶಿಕ್ಷಕ ಗಣೇಶ್ ಜಿ ಹೇಳಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಟ್ಟೆ ಸಾಸ್ತಾನ ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನ ಇದರ ವಿಸ್ಮಯ ಶೀರ್ಷಿಕೆಯಡಿ ಕಾರ್ಯಕ್ರಮದಲ್ಲಿ ಮಾತನಾಡಿ, ಆಗಿನ ಕಾಲದಲ್ಲಿ ನೊಬೆಲ್ ಪ್ರಶಸ್ತಿ ಮೂಲಕ ವಿಶ್ವಮನ್ನಣೆ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಿತು.

ವಿಜ್ಞಾನ ಅಂದರೇ ಸತ್ಯದ ಅನ್ವೇಷಣೆ, ಈ ಮೂಲಕ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ವಿಜ್ಞಾನದ ಕಡೆ ಮುಖಮಾಡಬೇಕಿದೆ. ತನ್ನಲ್ಲಿರುವ ಜ್ಞಾನದ ಸುಧೆ ಹರಿಸಿ ಹೊಸ ಹೊಸ ಆವಿಷ್ಕಾರಕ್ಕೆ ಮುಂದಡಿ ಇಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ಇತ್ತರಲ್ಲದೆ ಇಂದು ತಂತ್ರಜ್ಞಾನ ಕ್ಷೇತ್ರ ಸಾಕಷ್ಟು ಮುಂದುವರೆದಿದೆ. ಎಲ್ಲಾ ಕ್ಷೇತ್ರದಲ್ಲೂ ವಿಜ್ಞಾನ ಪರಿಚಯಿಸಿಕೊಂಡಿದೆ. ಈ ದಿಸೆಯಲ್ಲಿ ಅಭಿವೃದ್ಧಿ ಪೂರಕವಾಗುವ ಆವಿಷ್ಕಾರಗಳ ಬಗ್ಗೆ ಗಮನ ನೀಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಛೇರಿ ಉಡುಪಿ ಇದರ ಡಿವೈಪಿಸಿ ಚಂದ್ರ ನಾಯ್ಕ್ ಸಿ ವಿ ರಾಮನ್ ರೇಖಾಚಿತ್ರವನ್ನು ಅನಾವರಣಗೊಳಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷ ಡೆನಿಸ್ ಡಿಸೋಜ ವಹಿಸಿದ್ದರು.

ವಿಜ್ಞಾನ ಮಾದರಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಮನ್ವಿತ್ ಇವರನ್ನು ಸನ್ಮಾನಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಡಾ.ಕೆ.ಶಿವರಾಮ ಕಾರಂತ ಹಾಗೂ ಗೋಪಾಲ ನಾಯ್ಕ್ ಹೆಸರಿನಲ್ಲಿ ದತ್ತಿನಿಧಿ ಪುರಸ್ಕಾರ ನೀಡಲಾಯಿತು.

ಅತಿಥಿಗಳಾಗಿ ಉಡುಪಿ ಡಯೇಟ್ ಉಪನ್ಯಾಸಕಿ ಶೋಭಾ, ಬ್ರಹ್ಮಾವರ ಕ್ಷೇತ್ರ ಸಮನ್ವಯ ಅಧಿಕಾರಿ ಅರ್ಚನ, ಬ್ರಹ್ಮಾವರ ವಲಯ ಪ್ರಾಥಮಿಕ ಶಿಕ್ಷಕರ ಸಂಘ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಅಗಸ್ತ್ಯ ಫೌಂಡೇಶನ್ ಇದರ ಕಿರಣ್ ಕುಮಾರ್, ಶಾಲಾ ಎಸ್ ಡಿ ಎಮ್ ಸಿ ಉಪಾಧ್ಯಕ್ಷೆ ಮೊಹಂತಿ, ಶಾಲಾ ಹಿರಿಯ ವಿದ್ಯಾರ್ಥಿ ಪರೀಕ್ಷಿತ್, ಸಮಿತ್ರ ಮುಂತಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಸೇಸು ಸ್ವಾಗತಿಸಿದರು.ವಿಜ್ಞಾನ ಶಿಕ್ಷಕಿ ವೀಣಾ ಪ್ರಾಸ್ತಾವನೆಗೈದರು. ಶಿಕ್ಷಕಿ ಉಷಾರಾಣಿ ವಂದನಾರ್ಪಣೆಗೈದರು. ವಿದ್ಯಾರ್ಥಿಗಳಾದ ವೈಷ್ಣವಿ, ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್...

ಹಿರಿಯ ಛಾಯಾ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

ಉಡುಪಿ, ಜೂ.18: ಹಿರಿಯ ಛಾಯಾಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ...

ಜಾಗತಿಕ ನಾವೀನ್ಯತೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಭಾರತ: ವಿವಾಟೆಕ್ 2026 ರಲ್ಲಿ ಪ್ರಧಾನಿ ಮೋದಿ ಮಾತು

ಯು.ಬಿ.ಎನ್.ಡಿ., ಜೂ.18: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್...

ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ: ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ಜೂ.18: ಭಾರತ ಸ್ವಾತಂತ್ರ್ಯ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ...
error: Content is protected !!