Monday, October 7, 2024
Monday, October 7, 2024

ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನ: ವೈಭವದ ವಸಂತೋತ್ಸವ

ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನ: ವೈಭವದ ವಸಂತೋತ್ಸವ

Date:

ಉಡುಪಿ, ಜೂ.7: ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಇಲ್ಲಿ ವಸಂತ ಮಾಸದ ಪ್ರಯುಕ್ತ ಸ್ವಯಂಸೇವಕರು ಮತ್ತು ಜಿ.ಎಸ್.ಬಿ ಯುವಕ ಮಂಡಳಿಯ ವತಿಯಿಂದ ಈ ವರ್ಷದ ಕೊನೆಯ ವಸಂತೋತ್ಸವವು ಗುರುವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಶ್ರೀ ದೇವರ ಸನ್ನಿಧಿಯಲ್ಲಿ ಪ್ರಧಾನ ಅರ್ಚಕ ದಯಾಘನ್ ಭಟ್ ಶ್ರೀ ದೇವರಿಗೆ ವಿಶೇಷ ಅಲಂಕಾರ ಮಾಡಿ ಮಂಗಳಾರತಿ ಬೆಳಗಿಸಿದರು. ಶ್ರೀ ದೇವರಿಗೆ ಸ್ವರ್ಣ ಪಲ್ಲಕ್ಕಿ ಉತ್ಸವ, ವೇದಘೋಷ, ಭಜನೆ, ವಿವಿಧ ಮಂಗಳವಾದ್ಯದೊಂದಿಗೆ ಲಾಲ್ಕಿ ಉತ್ಸವ ನಡೆಯಿತು.

ಶ್ರೀ ದೇವರಿಗೆ ವಿಶೇಷ ಅಲಂಕಾರ

ಬಳಿಕ ಅಷ್ಠಾವಧಾನ ಸೇವೆ, ಮಹಾಪೂಜೆಯ ನಂತರ ಪ್ರಸಾದ ವಿತರಣೆ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ಪಿ.ವಿ. ಶೆಣೈ, ಗಣೇಶ್ ಕಿಣಿ, ಭಜನಾ ಸಮಿತಿಯ ರೂವಾರಿ ಸತೀಶ್ ಕಿಣಿ, ಚೇ೦ಪಿ ರಾಮಚಂದ್ರ ಭಟ್, ವಿಶಾಲ್ ಶೆಣೈ, ಸತೀಶ್ ಕಾಮತ್, ದೀಪಕ್ ಭಟ್, ಗಿರೀಶ್ ಭಟ್, ನರಹರಿ ಪೈ, ಪ್ರದೀಪ್ ರಾವ್, ಯುವಕ ಮಂಡಲದ ಅಧ್ಯಕ್ಷ ನಿತೇಶ ಶೆಣೈ, ಆಡಳಿತ ಮಂಡಳಿಯ ಸದಸ್ಯರು, ಶ್ರೀ ಲಕ್ಷ್ಮಿ ವೆಂಕಟೇಶ ಭಗನಿ ವೃಂದ ಹಾಗು ಜಿ.ಎಸ್.ಬಿ. ಯುವಕ ಮಂಡಳಿ, ಮಹಿಳಾ ಮಂಡಳಿ ಸದಸ್ಯರು ಹಾಗೂ ನೂರಾರು ಸಮಾಜಬಾಂಧವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!