Monday, September 30, 2024
Monday, September 30, 2024

ಕಡಿಯಾಳಿಯ ಅಂಗನವಾಡಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಕಡಿಯಾಳಿಯ ಅಂಗನವಾಡಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

Date:

ಉಡುಪಿ, ಜೂ.12: ಉಡುಪಿ ನಗರದ ಕಡಿಯಾಳಿ ಅಂಗನವಾಡಿ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿಯ ಸುತ್ತಮುತ್ತಲಿನ ಪರಿಸರ, ಮಕ್ಕಳ ತರಗತಿ ಗೃಹ, ಅಡುಗೆ ಕೋಣೆ, ದಾಸ್ತಾನು ಕೊಠಡಿ ಸೇರಿದಂತೆ ಮತ್ತಿತರ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ಕಟ್ಟಡದ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ಇತ್ತೀಚಿನ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ತಾಣವಾಗುವ ಸಾಧ್ಯತೆ ಇರುತ್ತದೆ. ಸೊಳ್ಳೆಗಳ ಕಚ್ಚುವಿಕೆಯಿಂದ ಮಕ್ಕಳಿಗೆ ರೋಗ- ರುಜಿನಗಳು ಬರುವ ಸಾಧ್ಯತೆ ಇರುತ್ತದೆ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು. ಪ್ರಸಕ್ತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆಹಾರ, ಉತ್ಪನ್ನಗಳ ಬಗ್ಗೆ ಮಾಹಿತಿ ಪಡೆದ ಅವರು, ಉತ್ತಮ ಗುಣಮಟ್ಟದ ಆಹಾರ ವಿತರಣೆಗೆ ಸೂಚನೆ ನೀಡಿದರು. ಮಕ್ಕಳಿಗೆ ನೀಡುತ್ತಿರುವ ಆಟಿಕೆ ವಸ್ತುಗಳನ್ನು ಖುದ್ದಾಗಿ ಪರಿಶೀಲಿಸಿದ ಅವರು, ಮಕ್ಕಳಿಂದ ರೈಮ್ಸ್ ಹೇಳಿದ್ದನ್ನು ಕೇಳಿದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಸ್‌ಪಿ ಡಾ. ಅರುಣ್ ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!