Tuesday, October 1, 2024
Tuesday, October 1, 2024

ಶಂಕರನಾರಾಯಣ: ನೋಟ್ ಪುಸ್ತಕ ಮತ್ತು ಟಿ-ಶರ್ಟ್ ವಿತರಣೆ

ಶಂಕರನಾರಾಯಣ: ನೋಟ್ ಪುಸ್ತಕ ಮತ್ತು ಟಿ-ಶರ್ಟ್ ವಿತರಣೆ

Date:

ಉಡುಪಿ, ಜೂ.14: ಶಂಕರನಾರಾಯಣ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ದಾನಿಗಳಿಂದ ನೀಡಲ್ಪಟ್ಟ ನೋಟ್ ಪುಸ್ತಕ ಮತ್ತು ಟಿ-ಶರ್ಟ್ ವಿತರಣಾ ಕಾರ್ಯಕ್ರಮ ಶಂಕರನಾರಾಯಣ ಹಿರಿಯ ಪ್ರಾಥವಿಕ ಶಾಲೆಯಲ್ಲಿ ನಡೆಯಿತು. ಮುಖ್ಯ ಶಿಕ್ಷಕಿ ಅನ್ನಪೂರ್ಣ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಶ್ಯಾಮ ಉಡುಪ ನ್ಯೂಟ್ರಿ ಫೀಡ್ಸ್ ಬೆಂಗಳೂರು ಇವರು ಎಲ್‌ಕೆಜಿಯಿಂದ 7ನೇ ತರಗತಿಯ ವರೆಗಿನ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದ ಎಲ್ಲಾ ವಿಧ್ಯಾರ್ಥಿಗಳಿಗೆ ಸುಮಾರು ಒಂದು ಲಕ್ಷ ರೂ ಮೌಲ್ಯದ ಟಿ-ಶರ್ಟ್ನ್ನು ಉಚಿತವಾಗಿ ನೀಡಿದ್ದು ಶುಭ ಹಾರೈಸಿದರು. ಎಲ್.ಕೆ.ಜಿ ಯಿಂದ 7ನೇ ತರಗತಿ ವರೆಗಿನ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ
ಲೇಖನ ಸಾಮಗ್ರಿಗಳನ್ನು ದಿನೇಶ್ ಯಡೇರಿ ಹಾಗೂ ಸಹೋದರರು ಉಚಿತವಾಗಿ ನೀಡಿದರು. ಸರಕಾರದಿಂದ ನೀಡಿರುವ ಪಠ್ಯಪುಸ್ತಕವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ದಾನಿಗಳಾದ ಶ್ಯಾಮ ಉಡುಪ ದಂಪತಿ ಹಾಗೂ ದಿನೇಶ ಯಡೇರಿ ಸಹೋದರರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!