Home ಸುದ್ಧಿಗಳು ಪ್ರಾದೇಶಿಕ ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

371
0

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಹೊಸ ಸಾವಯುವ ಕೃಷಿ ಉತ್ತೇಜನಗೊಳಿಸಲು ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ದೊರಕಿಸಲು ಸಾವಯವ ಸಿರಿ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿರುತ್ತದೆ.

ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ
ಹಾಗೂ 10 ವರ್ಷಗಳ ಅನುಭವವುಳ್ಳ ಟ್ರಸ್ಟ್ ಹಾಗೂ ಸೊಸೈಟಿ ಕಾಯಿದೆಯಡಿ ನೋಂದಾಯಿತ ಸಾವಯವ ಕೃಷಿಕರ ಸಂಘ, ಸಾವಯವ ಒಕ್ಕೂಟ ಅಥವಾ ಸಾವಯವ ಗುಂಪುಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.