Saturday, August 29, 2026
Saturday, August 29, 2026

ಸರ್ವಸ್ಪರ್ಶಿ ಸರ್ವವ್ಯಾಪಿ ಧ್ಯೇಯದ ಜನಪರ ಬಜೆಟ್: ಯಶ್ಪಾಲ್ ಸುವರ್ಣ

ಸರ್ವಸ್ಪರ್ಶಿ ಸರ್ವವ್ಯಾಪಿ ಧ್ಯೇಯದ ಜನಪರ ಬಜೆಟ್: ಯಶ್ಪಾಲ್ ಸುವರ್ಣ

Date:

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ 2022-23ನೇ ಸಾಲಿನ ಬಜೆಟ್ ಸರ್ವಸ್ಪರ್ಶಿ ಸರ್ವವ್ಯಾಪಿ ಧ್ಯೇಯದೊಂದಿಗೆ ಜನಪರವಾಗಿದ್ದು ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸರ್ವರಿಗೂ ಸಮಪಾಲು ಸಮಬಾಳು ಸಿದ್ದಾಂತದಲ್ಲಿ ಬಜೆಟ್ ಮಂಡಿಸಿದ್ದಾರೆ.

ಕರಾವಳಿ ಜಿಲ್ಲೆಯ ಮೀನುಗಾರಿಕೆ ಬಂದರು ಅಭಿವೃದ್ಧಿಗೆ ಗರಿಷ್ಠ ಅನುದಾನ, ವಸತಿ ರಹಿತ  ಮೀನುಗಾರರಿಗೆ 5000 ವಸತಿ  ನಿರ್ಮಾಣ, ಮತ್ಸ್ಯ ಸಿರಿ ಯೋಜನೆಯ ಮೂಲಕ ಅಳ ಸಮುದ್ರ ಮೀನುಗಾರಿಕೆ ಉತ್ತೇಜನ ನೀಡಲು ಮುಂದಾಗಿರುವುದು ಶ್ಲಾಘನೀಯ.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ, ಶ್ರೀ ನಾರಾಯಣ ಗುರು ವಸತಿ ಶಾಲೆಗಳ ನಿರ್ಮಾಣ, ಕಡಲ ತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಮಾನದಂಡಗಳ ಸರಳೀಕರಣ, ಕಾರವಾರದಲ್ಲಿ ರಾಜ್ಯದ ಮೊದಲ ಜಲಸಾರಿಗೆ ಮತ್ತು  ಮೀನುಗಾರಿಕೆ ತರಬೇತಿ ಸಂಸ್ಥೆ ಸ್ಥಾಪನೆ, ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರುಜಾರಿ, ಗೋ ಶಾಲೆಗಳ ಗೋವು ದತ್ತು ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪುಣ್ಯ ಕೋಟಿ ದತ್ತು ಯೋಜನೆಗೆ ಚಾಲನೆ,  ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಶಾಲಾ ಕಾಲೇಜುಗಳ ಉನ್ನತೀಕರಣಕ್ಕೆ ಅನುದಾನ ಒದಗಿಸುವ ಮೂಲಕ ಜನಪರ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳಿಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!