Monday, February 24, 2025
Monday, February 24, 2025

ಸರಸ್ವತಿ ವಿದ್ಯಾಲಯ: ಬೀಳ್ಕೊಡುಗೆ ಸಮಾರಂಭ

ಸರಸ್ವತಿ ವಿದ್ಯಾಲಯ: ಬೀಳ್ಕೊಡುಗೆ ಸಮಾರಂಭ

Date:

ಕುಂದಾಪುರ, ಜೂ.21: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ವಿಭಾಗದ ಉಪನ್ಯಾಸಕರಾಗಿ ಒಟ್ಟಾರೆ 34 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ವಯೋನಿವೃತ್ತಿ ಹೊಂದಿದ ಹೆಚ್ ಭಾಸ್ಕರ ಶೆಟ್ಟಿ ಮತ್ತು ನಿವೃತ್ತಿಯ ಬಳಿಕ ಎರಡು ವರ್ಷಗಳ ಕಾಲ ದೈಹಿಕ ಶಿಕ್ಷಣ ಉಪನ್ಯಾಸಕರಾಗಿ ವಿಶೇಷ ಸೇವೆಯನ್ನು ಸಲ್ಲಿಸಿದ ನಾಗರಾಜ ಶೆಟ್ಟಿ ಅವರ ಬೀಳ್ಕೊಡುಗೆ ಸಮಾರಂಭವು ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಜಿಎಸ್​​ವಿಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಸಂಚಾಲಕ ಎನ್ ಸದಾಶಿವ ನಾಯಕ್, ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ನಿವೃತ್ತ ಉಪನ್ಯಾಸಕರನ್ನು ಅಭಿನಂದಿಸಿ ಮಾತನಾಡಿದರು.

ಹಿಂದಿ ಭಾಷಾ ಉಪನ್ಯಾಸಕರಾದ ನಾರಾಯಣ ಈ ನಾಯ್ಕ್ ನಿವೃತ್ತರ ಸಾಧನೆಗಳನ್ನು ಪರಿಚಯಿಸಿದರು. ಭಾಸ್ಕರ್ ಶೆಟ್ಟಿ ಮತ್ತು ಶೋಭಾ ರಾಣಿ ದಂಪತಿ ಹಾಗೂ ನಾಗರಾಜ ಶೆಟ್ಟಿ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ, ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕಿ ಲವೀನ ಸಾವಿಯಾ ಸಿಕ್ವೇರಾ ಉಪಸ್ಥಿತರಿದ್ದರು. ಹೈಸ್ಕೂಲ್ ವಿಭಾಗದ ಕಚೇರಿ ಮುಖ್ಯಸ್ಥರಾದ ಶ್ರೀಧರ್ ಗಾಣಿಗ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಕಚೇರಿ ಪ್ರಬಂಧಕರಾದ ಪ್ರಮೋದ ಪೈ ಎಮ್. ಜಿ ಧನ್ಯವಾದ ಅರ್ಪಿಸಿದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ನಿರ್ವಹಿಸಿದರು. ಆಂಗ್ಲ ಭಾಷೆ ಉಪನ್ಯಾಸಕಿ ಸುಪ್ರೀತ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!