Monday, February 24, 2025
Monday, February 24, 2025

ಯೋಗದಿಂದ ರೋಗಮುಕ್ತರಾಗಿ: ಪ್ರಕಾಶ್ಚಂದ್ರ ಶೆಟ್ಟಿ

ಯೋಗದಿಂದ ರೋಗಮುಕ್ತರಾಗಿ: ಪ್ರಕಾಶ್ಚಂದ್ರ ಶೆಟ್ಟಿ

Date:

ಬ್ರಹ್ಮಾವರ, ಜೂ.22: ಜಿ.ಎಂ. ಗ್ಲೋಬಲ್ ಸ್ಕೂಲ್, ಬ್ರಹ್ಮಾವರ ಇಲ್ಲಿ ಹತ್ತನೆಯ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲ ಪ್ರಣವ್ ಶೆಟ್ಟಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಯೋಗ, ಭಾರತದ ಪ್ರಾಚೀನ ಮತ್ತು ಸನಾತನ ವಿದ್ಯೆ. ವೇದಕಾಲಕ್ಕಿಂತಲೂ ಹಿಂದೆ ಯೋಗಾಸನಗಳು ರೂಢಿಯಲ್ಲಿದ್ದವು. ಇಂದು ಭಾರತವು ಯೋಗಾಸನ ಕ್ಷೇತ್ರದಲ್ಲಿ ವಿಶ್ವಕ್ಕೆ ಗುರುಸ್ಥಾನದಲ್ಲಿದೆ ಹಾಗೂ ಯೋಗಕ್ಕೆ ವಿಶ್ವಮಾನ್ಯತೆ ಇದೆ. ಶಿಸ್ತಿನ ಜೀವನವನ್ನು ನಡೆಸುವುದೇ ಒಂದು ಯೋಗ ಎಂದರು.

ಮುಖ್ಯ ಅತಿಥಿಯಾಗಿ ಯೋಗ ತರಬೇತುದಾರರಾದ ಎಕ್ಸಲೆಂಟ್ ಸಿಬಿಎಸ್‌ಇ ಶಾಲೆ ಮೂಡುಬಿದ್ರೆಯಲ್ಲಿ ಸಹಶಿಕ್ಷಕಿ ಮಮತಾ ಗಣೇಶ್ ಅವರು ಅಷ್ಟಾಂಗ ಯೋಗ ಪರಿಪಾಲನೆ ನಿಮ್ಮಲ್ಲಿ ಬೆಳೆಸಿಕೊಳ್ಳಿ ಎಂಬ ಧ್ಯೇಯ ವಾಕ್ಯದೊಂದಿಗೆ ಯೋಗಾಭ್ಯಾಸದ ಆಸನಗಳ ಪ್ರಾತ್ಯಕ್ಷಿಕೆಯನ್ನು ನೀಡಿದರು.

ಜಿ.ಎಂ. ಗ್ಲೋಬಲ್ ಶಾಲಾ ಸಂಸ್ಥಾಪಕರು ಹಾಗೂ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ವಿಶ್ವ ಆರೋಗ್ಯಕ್ಕಾಗಿ ಯೋಗ, ಸದೃಢ ಮನಸ್ಸಿಗಾಗಿ ನಿರಂತರವಾಗಿ ಯೋಗಾಭ್ಯಾಸವನ್ನು ಮಾಡಿ ಎಂದು ತಿಳಿಸಿದರು. ಯೋಗದಿಂದ ರೋಗಮುಕ್ತರಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಕರೆ ನೀಡಿದರು. ವಿದ್ಯಾರ್ಥಿನಿ ಮಾನ್ಯತಾ ಯೋಗದ ಮಹತ್ವದ ಕುರಿತು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿ ಕೌಶಿಕ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸ್ಮಯನ್ ಶೆಟ್ಟಿ ಸ್ವಾಗತಿಸಿ, ಶಿವಾನಿ ಪಾಟೀಲ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!