Tuesday, February 25, 2025
Tuesday, February 25, 2025

ಮನಸ್ಸಿನ ಕೊಳೆಯನ್ನು ಸ್ವಚ್ಚಗೊಳಿಸುವ ಸಾಬೂನೇ ಸಾಹಿತ್ಯ: ಎಚ್.ಸುಜಯೀಂದ್ರ ಹಂದೆ

ಮನಸ್ಸಿನ ಕೊಳೆಯನ್ನು ಸ್ವಚ್ಚಗೊಳಿಸುವ ಸಾಬೂನೇ ಸಾಹಿತ್ಯ: ಎಚ್.ಸುಜಯೀಂದ್ರ ಹಂದೆ

Date:

ಕೋಟ, ಜು.3: ಸಾಹಿತ್ಯ ಎಂದರೆ ಕೇವಲ ಕವನ ಮತ್ತು ಕಥೆಯಲ್ಲ. ಸಾಹಿತ್ಯವು ಮನುಷ್ಯನ ಏಕಾಂತವನ್ನು ದೂರ ಮಾಡುತ್ತದೆ. ಹಕ್ಕಿಗಳಿಗೆ ರೆಕ್ಕೆ ಬಂದಾಗ, ಹಕ್ಕಿಗಳು ರೆಕ್ಕೆಯ ಮೇಲಿನ ಆತ್ಮವಿಶ್ವಾಸದಿಂದ ಹಾರುವಂತೆ, ಕಥೆ-ಕವನಗಳನ್ನು ಓದುವುದರಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚುತ್ತದೆ. ಜ್ಞಾನ ಹೆಚ್ಚುತ್ತದೆ. ಆಗ ಆ ವಿದ್ಯಾರ್ಥಿಯು ಯಾವುದೇ ಸಮಸ್ಯೆಗಳನ್ನು ಸುಲಭವಾಗಿ ಎದುರಿಸಬಲ್ಲ. ಸಾಹಿತ್ಯವನ್ನು ಓದುವುದರಿಂದ ವಿದ್ಯಾರ್ಥಿಗಳ ನೈತಿಕ ಮೌಲ್ಯ ಹೆಚ್ಚುತ್ತದೆ. ಅದರ ಪರಿಣಾಮವಾಗಿ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಜೀವನದ ಪ್ರತಿಯೊಂದು ಸಮಸ್ಯೆಗೆ ಪರಿಹಾರ ಸಿಗುತ್ತದೆ. ಸಾಹಿತ್ಯವು ಮನಸ್ಸಿನ ಕೊಳೆಯನ್ನು ತೆಗೆಯುವ ಸಾಬೂನು ಎಂದು ಕಥೆ, ಕವನದ ಮೂಲಕ ವಿದ್ಯಾರ್ಥಿಗಳಿಗೆ ಉಪನ್ಯಾಸಕ ಎಚ್ ಸುಜಯೀಂದ್ರ ಹಂದೆ ತಿಳಿಹೇಳಿದರು. ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಾಹಿತ್ಯ ಸಂಘದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಸ್ವಾಗತಿಸಿದರು. ಕಾಲೇಜಿನ ಉಪನ್ಯಾಸಕರಾದ ಪ್ರೇಮಾನಂದ ಮತ್ತು ಶಂಭು ಭಟ್ ಹಂದೆಯವರನ್ನು ಸನ್ಮಾನಿಸಿದರು. ಹಿರಿಯ ಶಿಕ್ಷಕ ವೆಂಕಟೇಶ ಉಡುಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಸಂಘದ ಸಂಚಾಲಕಿ ನಳಿನಾಕ್ಷಿ ವಂದಿಸಿದರು. ಸಾಹಿತ್ಯ ಸಂಘದ ಅಧ್ಯಕ್ಷ ವಿದ್ಯಾರ್ಥಿ ಅಮಿತ್ ಕಾರ್ಯಕ್ರಮ ನಿರೂಪಿಸಿದರು. ನಿಧೀಶ ಭಟ್ ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...
error: Content is protected !!