Sunday, October 6, 2024
Sunday, October 6, 2024

ಮನಸ್ಸಿನ ಕೊಳೆಯನ್ನು ಸ್ವಚ್ಚಗೊಳಿಸುವ ಸಾಬೂನೇ ಸಾಹಿತ್ಯ: ಎಚ್.ಸುಜಯೀಂದ್ರ ಹಂದೆ

ಮನಸ್ಸಿನ ಕೊಳೆಯನ್ನು ಸ್ವಚ್ಚಗೊಳಿಸುವ ಸಾಬೂನೇ ಸಾಹಿತ್ಯ: ಎಚ್.ಸುಜಯೀಂದ್ರ ಹಂದೆ

Date:

ಕೋಟ, ಜು.3: ಸಾಹಿತ್ಯ ಎಂದರೆ ಕೇವಲ ಕವನ ಮತ್ತು ಕಥೆಯಲ್ಲ. ಸಾಹಿತ್ಯವು ಮನುಷ್ಯನ ಏಕಾಂತವನ್ನು ದೂರ ಮಾಡುತ್ತದೆ. ಹಕ್ಕಿಗಳಿಗೆ ರೆಕ್ಕೆ ಬಂದಾಗ, ಹಕ್ಕಿಗಳು ರೆಕ್ಕೆಯ ಮೇಲಿನ ಆತ್ಮವಿಶ್ವಾಸದಿಂದ ಹಾರುವಂತೆ, ಕಥೆ-ಕವನಗಳನ್ನು ಓದುವುದರಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚುತ್ತದೆ. ಜ್ಞಾನ ಹೆಚ್ಚುತ್ತದೆ. ಆಗ ಆ ವಿದ್ಯಾರ್ಥಿಯು ಯಾವುದೇ ಸಮಸ್ಯೆಗಳನ್ನು ಸುಲಭವಾಗಿ ಎದುರಿಸಬಲ್ಲ. ಸಾಹಿತ್ಯವನ್ನು ಓದುವುದರಿಂದ ವಿದ್ಯಾರ್ಥಿಗಳ ನೈತಿಕ ಮೌಲ್ಯ ಹೆಚ್ಚುತ್ತದೆ. ಅದರ ಪರಿಣಾಮವಾಗಿ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಜೀವನದ ಪ್ರತಿಯೊಂದು ಸಮಸ್ಯೆಗೆ ಪರಿಹಾರ ಸಿಗುತ್ತದೆ. ಸಾಹಿತ್ಯವು ಮನಸ್ಸಿನ ಕೊಳೆಯನ್ನು ತೆಗೆಯುವ ಸಾಬೂನು ಎಂದು ಕಥೆ, ಕವನದ ಮೂಲಕ ವಿದ್ಯಾರ್ಥಿಗಳಿಗೆ ಉಪನ್ಯಾಸಕ ಎಚ್ ಸುಜಯೀಂದ್ರ ಹಂದೆ ತಿಳಿಹೇಳಿದರು. ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಾಹಿತ್ಯ ಸಂಘದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಸ್ವಾಗತಿಸಿದರು. ಕಾಲೇಜಿನ ಉಪನ್ಯಾಸಕರಾದ ಪ್ರೇಮಾನಂದ ಮತ್ತು ಶಂಭು ಭಟ್ ಹಂದೆಯವರನ್ನು ಸನ್ಮಾನಿಸಿದರು. ಹಿರಿಯ ಶಿಕ್ಷಕ ವೆಂಕಟೇಶ ಉಡುಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಸಂಘದ ಸಂಚಾಲಕಿ ನಳಿನಾಕ್ಷಿ ವಂದಿಸಿದರು. ಸಾಹಿತ್ಯ ಸಂಘದ ಅಧ್ಯಕ್ಷ ವಿದ್ಯಾರ್ಥಿ ಅಮಿತ್ ಕಾರ್ಯಕ್ರಮ ನಿರೂಪಿಸಿದರು. ನಿಧೀಶ ಭಟ್ ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!