Sunday, October 6, 2024
Sunday, October 6, 2024

ಡಾ. ಶ್ರುತಿ ಬಲ್ಲಾಳ್ ರವರಿಗೆ ಐಎಂಎ ಪುರಸ್ಕಾರ

ಡಾ. ಶ್ರುತಿ ಬಲ್ಲಾಳ್ ರವರಿಗೆ ಐಎಂಎ ಪುರಸ್ಕಾರ

Date:

ಉಡುಪಿ, ಜು.3: ಆರ್ಯಭಟ ಪ್ರಶಸ್ತಿ ಪುರಸ್ಕೃತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರನ್ನು ವೈದ್ಯರ ದಿನಾಚರಣೆಯಂದು ಭಾರತೀಯ ವೈದ್ಯರ ಸಂಘ ಉಡುಪಿ ಕರಾವಳಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವ ಡಾ. ಶ್ರುತಿ ಬಳ್ಳಾಲ್ ಅವರು ತಮ್ಮ ಸಾಮಾಜಿಕ ಜವಾಬ್ದಾರಿ ಚಟುವಟಿಕೆಗಳ ಭಾಗವಾಗಿ ಮಧುಮೇಹ ತಡೆಗಟ್ಟುವಿಕೆ, ಮುಂದೂಡಿಕೆ, ಆರೈಕೆ, ಉತ್ತಮ ಜೀವನಶೈಲಿಯ ಬಗ್ಗೆ ಶಾಲಾ-ಕಾಲೇಜು ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಈಗಾಗಲೇ 90ಕ್ಕೂ ಅಧಿಕ ಉಚಿತ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಉಡುಪಿಯ ಬಿಗ್ ಮೆಡಿಕಲ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕರ್ನಾಟಕದ ಪ್ರಥಮ ಮಹಿಳಾ ಹೃದಯ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ, ಭಾ.ವೈ.ಸಂಘದ ಅಧ್ಯಕ್ಷೆ ಡಾ. ರಾಜಲಕ್ಷ್ಮಿ, ಡಾ. ಆಮ್ನಾ ಹೆಗ್ಡೆ, ಡಾ. ಅರ್ಚನಾ ಭಕ್ತ, ಡಾ. ಇಂದಿರಾ ಶಾನ್ ಭಾಗ್ ಹಾಗೂ ಡಾ. ಅಕ್ಷತಾ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!