Sunday, February 23, 2025
Sunday, February 23, 2025

ಸೇವಾನಿರತ ಸಾಧಕ ಸಂಸ್ಥೆಗಳ ಪದಾಧಿಕಾರಿಯಾಗುವುದು ಯೋಗ: ಹೆರಿಯ ಮಾಸ್ಟರ್

ಸೇವಾನಿರತ ಸಾಧಕ ಸಂಸ್ಥೆಗಳ ಪದಾಧಿಕಾರಿಯಾಗುವುದು ಯೋಗ: ಹೆರಿಯ ಮಾಸ್ಟರ್

Date:

ಕೋಟ, ಜು.7: ಸೇವಾನಿರತ ಸಾಧಕ ಸಂಸ್ಥೆಗಳ ಪದಾಧಿಕಾರಿಯಾಗುವುದು ಯೋಗ. ಅನವರತವೂ ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ಸಮಾಜಮುಖಿಯಾಗಿ ಕಾಣಿಸಿಕೊಂಡ ಗಣಪತಿ ಟಿ. ಶ್ರೀಯಾನ್ ಹಾಗೂ ಕೃಷ್ಣ ಮೊಗವೀರ ಈರ್ವರೂ ಸೇವಾನಿರತರು. ಯಶಸ್ವೀ ಕಲಾವೃಂದ ಇಂತಹ ಅನೇಕ ಪ್ರತಿಭಾನ್ವಿತರನ್ನು ಇದೇ ವೇದಿಕೆಯಲ್ಲಿ ಗುರುತಿಸಿರುವುದು ಸ್ತುತ್ಯರ್ಹ. ಸಾಮಾಜಿಕ ಬದ್ಧತೆ ಇರುವವರನ್ನು ಮಾತ್ರ ರೋಟರಿಯಂತಹ ಸಂಸ್ಥೆ ಗುರುತಿಸುವುದು. ಇಂಥವರು ಸಮಾಜದಲ್ಲಿ ಬಹು ಎತ್ತರಕ್ಕೆ ಏರಲು ಸಾಧ್ಯ. ಯಶಸ್ವೀ ಕಲಾವೃಂದ ಚಿಕ್ಕ ಮಕ್ಕಳನ್ನು ಸಾಂಸ್ಕೃತಿಕವಾಗಿ ಬೆಳೆಸಿ ಕಲಾತ್ಮಕ ಬದುಕನ್ನು ಕಲ್ಪಿಸುವಂತಹ ಸಂಸ್ಥೆ. ಸಂಸ್ಥೆಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಾ ರೋಟರಿ ಸಂಸ್ಥೆಯ ಚುಕ್ಕಾಣಿ ಹಿಡಿದಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೆರಿಯ ಮಾಸ್ಟರ್ ಅಭಿಪ್ರಾಯಪಟ್ಟರು.

ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ ಕೊಮೆ, ತೆಕ್ಕಟ್ಟೆ ಆಶ್ರಯದಲ್ಲಿ ದಿಮ್ಸಾಲ್ ಫಿಲ್ಸ್ ಹಾಗೂ ಧಮನಿ ಟ್ರಸ್ಟ್ ಸಹಯೋಗದೊಂದಿಗೆ ‘ಸಿನ್ಸ್ 1999 ಶ್ವೇತಯಾನ-40’ರ ಕಾರ್ಯಕ್ರಮದಡಿಯಲ್ಲಿ ರೋಟರಿ ಕ್ಲಬ್ ತೆಕ್ಕಟ್ಟೆಯ ನೂತನ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್ ಹಾಗೂ ಕಾರ್ಯದರ್ಶಿ ಕೃಷ್ಣ ಮೊಗವೀರ ಇವರನ್ನು ಅಭಿನಂದಿಸಿ ಶಿಕ್ಷಕ ಹೆರಿಯ ಮಾಸ್ಟರ್ ಮಾತನಾಡಿದರು. ಕಾಯ ಅಳಿದರೂ ಕೀರ್ತಿ ಬೆಳಗಬೇಕು. ಈ ನಿಟ್ಟಿನಲ್ಲಿ ಈರ್ವರೂ ಪದಾಧಿಕಾರಿಗಳೂ ಬಹಳಷ್ಟು ಶ್ರಮಿಸುತ್ತಿರುವುದು ಸಮಾಜ ಮನಗಂಡಿದೆ. ಯಶಸ್ವೀ ಕಲಾವೃಂದ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳು ತಿಂಗಳ ಅಂತರದಲ್ಲಿಯೇ ವೇದಿಕೆ ಏರಿ ತಾಳಮದ್ದಳೆಯಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ಶ್ವೇತಯಾನ ಕಾರ್ಯಕ್ರಮಕ್ಕೆ ಪೋಷಕರು ಹಾಗೂ ಪ್ರಾಯೋಜಕರು ಪ್ರೋತ್ಸಾಹಿಸುತ್ತಿರುವುದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಯಕ್ಷಗುರು ಲಂಬೋದರ ಹೆಗಡೆ ನಿಟ್ಟೂರು ಹೇಳಿದರು.

ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ, ಗುರುಗಳಾದ ಕೃಷ್ಣಯ್ಯ ಆಚಾರ್ ಬಿದ್ಕಲ್‌ಕಟ್ಟೆ, ಮೋಹನಚಂದ್ರ ಪಂಜಿಗಾರು, ದೀಪಿಕಾ ಸಾಮಗ, ಗೋಪಾಲ ಪೂಜಾರಿ ಕುಂದಾಪುರ ಉಪಸ್ಥಿತರಿದ್ದರು. ಬಳಿಕ ಯಶಸ್ವೀ ಕಲಾವೃಂದ ಮಕ್ಕಳ ಮೇಳದ ಕಲಾವಿದರಿಂದ ‘ಸುಧನ್ವಾರ್ಜುನ’ ಯಕ್ಷಗಾನ ತಾಳಮದ್ದಳೆ ರಂಗದಲ್ಲಿ ಪ್ರಸ್ತುತಿಗೊಂಡಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!