Sunday, October 6, 2024
Sunday, October 6, 2024

ಗೀತಾನ್ವೇಷಣೆ ನಮ್ಮ ಪ್ರಧಾನ ಗುರಿ: ಪುತ್ತಿಗೆ ಶ್ರೀಪಾದರು

ಗೀತಾನ್ವೇಷಣೆ ನಮ್ಮ ಪ್ರಧಾನ ಗುರಿ: ಪುತ್ತಿಗೆ ಶ್ರೀಪಾದರು

Date:

ಉಡುಪಿ, ಜು.7: ಈಗಾಗಲೇ ಶ್ರೀಕೃಷ್ಣನಿಗೆ ಗೀತಾಧ್ಯಾಯ ಭಾವ ಪರಿಚಯ ಕೃತಿಯನ್ನು ಸಮರ್ಪಿಸಿರುವ ನಾವು ಗೀತಾನ್ವೇಷಣೆಯ ಸಂಕಲ್ಪವನ್ನು ಮಾಡಿದ್ದೇವೆ. ನೈಜವಾದ ಗೀತಾಸ್ವರೂಪವನ್ನು ಸಜ್ಜನರಿಗೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಗೀತಾಪಾಠ-ಪ್ರವಚನವನ್ನು ಪ್ರಾರಂಭಿಸುತ್ತಿದ್ದೇವೆ. ಶ್ರೀ ಮಧ್ವಾಚಾರ್ಯರು ಕರುಣಿಸಿರುವ ಭಾಷ್ಯದ ನೆರಳಲ್ಲಿ ಹೊಸ ದೃಷ್ಟಿಕೋನದಿಂದ ವಿಮರ್ಶಾತ್ಮಕವಾದ ಪಾಠವನ್ನು ‌ಸಂಕಲ್ಪಿಸಿದ್ದೇವೆ. ಶ್ರೀಕೃಷ್ಣನು ಗೀತೆಯಲ್ಲಿ ತಿಳಿಸಿದಂತೆ ಗೀತೆಯ ಉಪದೇಶವನ್ನು ಮೊದಲು ಸ್ವೀಕರಿಸಿದವನು ಸೂರ್ಯ. ‘ಇಮಂ ವಿವಸ್ವತೇ ಯೋಗಂ ಪ್ರೋಕ್ತವಾನಹಮವ್ಯಯಂ’ ಎಂದು. ಅದಕ್ಕೆ ಸಂವಾದಿಯಂಬಂತೆ ಪಾಠದ ಮೊದಲ ದಿನವೇ ಶ್ರೀಕೃಷ್ಣ ‘ಸೂರ್ಯ ಪಾರ್ಥಸಾರಥಿ’ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾನೆ. ಆದ್ದರಿಂದ ಶ್ರೀಕೃಷ್ಣನ ಪರಮಾನುಗ್ರಹದಿಂದ ಪಾಠವು ನಿರ್ವಿಘ್ನವಾಗಿ ನಡೆಯಲಿ ಎಂದು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಪ್ರಾರ್ಥಿಸಿದರು.

ವಿಶ್ವ ಗೀತಾ ಪರ್ಯಾಯದ ಅವಧಿಯಲ್ಲಿ ಹಮ್ಮಿಕೊಂಡಿರುವ ಜ್ಞಾನ ಯಜ್ಞದ ಅಂಗವಾಗಿ ಭಗವದ್ಗೀತಾ ಪಾಠವನ್ನು ಸರ್ವಜ್ಞ ಪೀಠದಿಂದ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಶತಾವಧಾನಿಗಳಾದ ಉಡುಪಿ ರಾಮನಾಥ ಆಚಾರ್ಯ, ಡಾ. ಬಿ.ಗೋಪಾಲಾಚಾರ್ಯ, ವಿದ್ವಾನ್ ವೇದವ್ಯಾಸ ಪುರಾಣಿಕ್, ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!