Sunday, February 23, 2025
Sunday, February 23, 2025

ಕಳಸ-ಕಾರ್ಕಳ ಇಮ್ಮಡಿ ಭೈರರಸನ ಶಾಸನದ ಮರು ಅಧ್ಯಯನ

ಕಳಸ-ಕಾರ್ಕಳ ಇಮ್ಮಡಿ ಭೈರರಸನ ಶಾಸನದ ಮರು ಅಧ್ಯಯನ

Date:

ಉಡುಪಿ, ಜು.11: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಕಲ್ಲಂಬಾಡಿ ಪ್ರದೇಶದಲ್ಲಿನ ಕುಸುಮ ಶೆಟ್ಟಿಯವರ ಗದ್ದೆಯ ಬದುವಿನಲ್ಲಿರುವ ಈ ಶಾಸನವನ್ನು ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿದ್ದು, 3 ಅಡಿ ಎತ್ತರ ಮತ್ತು 2 ಅಡಿ ಅಗಲವನ್ನು ಹೊಂದಿರುವ ಈ ಶಾಸನವು 16 ನೆಯ ಶತಮಾನದ ಕನ್ನಡ ಲಿಪಿ‌ ಮತ್ತು ಭಾಷೆಯ 18 ಸಾಲುಗಳನ್ನು ಒಳಗೊಂಡಿದೆ. ಶಾಸನದ ಮೇಲ್ಭಾಗದಲ್ಲಿ ಮುಕ್ಕೊಡೆಯಿದ್ದು ಇಕ್ಕೆಲಗಳಲ್ಲಿ ಸೂರ್ಯ-ಚಂದ್ರರ ಉಬ್ಬು ಕೆತ್ತನೆಯಿದೆ.

ಶಾಸನದ ಅಧ್ಯಯನವನ್ನು ಈ ಮೊದಲು ಮಾಡಿದ್ದರೂ ಸಹ ಕಾಲಮಾನದಲ್ಲಿ ವ್ಯತ್ಯಾಸ ಕಂಡು ಬಂದಿರುವುದರಿಂದ ಈ ಶಾಸನದ ಮರು ಅಧ್ಯಯನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ-ಉಡುಪಿ ಇದರ ಅಧ್ಯಯನ ನಿರ್ದೇಶಕ ಎಸ್.ಎ. ಕೃಷ್ಣಯ್ಯರವರ ಸಹಯೋಗದಲ್ಲಿ ಹಾಗೂ ಆದರ್ಶ್ ಶೆಟ್ಟಿ ಮತ್ತು ಅಕ್ಷಯ್ ಶೆಟ್ಟಿಯವರ ಮಾಹಿತಿಯ ಮೇರೆಗೆ ಮಾಡಿರುತ್ತಾರೆ.

ಜಿನ ಸ್ತುತಿಯೊಂದಿಗೆ ಪ್ರಾರಂಭವಾಗುವ ಈ ಶಾಸನವು 1452 (ಸಾಮಾನ್ಯ ವರ್ಷ 1530) ರ ವಿಕೃತಿ ಸಂವತ್ಸರದ ಮಕರ ಮಾಸ ಶುದ್ಧ 15ನೆಯ ಆದಿವಾರಕ್ಕೆ ಸೇರುತ್ತದೆ (ಮೊದಲ ಅಧ್ಯಯನದಲ್ಲಿ ಶಕವರ್ಷ 1442 ವಿಕ್ರಮ ಸಂವತ್ಸರ ಎಂದು ಓದಿರುತ್ತಾರೆ). ಈ ಸಂದರ್ಭದಲ್ಲಿ ಕಳಸ-ಕಾರ್ಕಳ ಭೈರರಸ ರಾಣಿ ಬೊಮ್ಮಲದೇವಿಯ ಪುತ್ರ ಇಮ್ಮಡಿ ಭೈರರಸನು ರಾಜ್ಯಭಾರ ಮಾಡುತ್ತಿದ್ದಾಗ ಮುಡಾಳಿಯವರು ಕಾರ್ಕಳದಲ್ಲಿನ ಅಜಿತನಾಥ (ಜೈನ ತೀರ್ಥಂಕರ) ದೇವರ ಅಮೃತಪಡಿಗೆ ಬಿಟ್ಟ ಭೂಮಿಯಲ್ಲಿ ಉತ್ಪತ್ತಿಯು ಕಡಿಮೆಯಾದಾಗ ಅದಕ್ಕೆ ಪ್ರತಿಯಾಗಿ ಇಮ್ಮಡಿ ಭೈರರಸನು ಕೊಟ್ಟ ಭೂ ದಾನದ ವಿವರವನ್ನು ಶಾಸನವು ಉಲ್ಲೇಖಿಸುತ್ತದೆ.

ಕ್ಷೇತ್ರಕಾರ್ಯ ಶೋಧನೆಯಲ್ಲಿ ಪುರಾತತ್ವ ವಿದ್ಯಾರ್ಥಿಗಳಾದ ವಿಶಾಲ್ ರೈ ಕೆ, ಶಶಾಂತ್, ಮಂಜುನಾಥ ನಂದಳಿಕೆ ಹಾಗೂ ಸ್ಥಳೀಯರಾದ ರತ್ನಾಕರ್ ಶೆಟ್ಟಿ, ವಸಂತ್ ಶೆಟ್ಟಿ ಮತ್ತು ರಾಜೀವಿ ಶೆಟ್ಟಿಯವರು ಸಹಕಾರ ನೀಡಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!