Monday, February 24, 2025
Monday, February 24, 2025

ಬಸ್ಸುಗಳು ಪರವಾನಿಗೆಯಲ್ಲಿ ನಿಗದಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ

ಬಸ್ಸುಗಳು ಪರವಾನಿಗೆಯಲ್ಲಿ ನಿಗದಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ

Date:

ಉಡುಪಿ, ಜು.11: ಸಂತೆಕಟ್ಟೆಯಿಂದ ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು-ಎನ್.ಎಚ್ 17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲು-ಕರಾವಳಿ ಬೈಪಾಸ್-ಅಂಬಲಪಾಡಿ ಬೈಪಾಸ್- ಬ್ರಹ್ಮಗಿರಿ-ಅಜ್ಜರಕಾಡು-ಹಳೇ ತಾಲೂಕು ಕಚೇರಿ ಮೂಲಕ ಸಿಟಿ ಬಸ್ಸು ನಿಲ್ದಾಣ ತಲುಪಲು, ಸಂತೆಕಟ್ಟೆಯಿಂದ ಉಡುಪಿಗೆ ಬರುವ ಉಳಿದ ಸಿಟಿ ಬಸ್ಸುಗಳು ಅಂಬಾಗಿಲು-ತಾಂಗದಗಡಿ-ಗುಂಡಿಬೈಲು- ಕಲ್ಸಂಕ ಮಾರ್ಗವಾಗಿ ಸಂಚರಿಸಿ ಸಿಟಿ ಬಸ್ಸು ನಿಲ್ದಾಣ ತಲುಪಲು ಮತ್ತು ಬಾರ್ಕೂರು ಬ್ರಹ್ಮಾವರ- ಹೊನ್ನಾಳ-ಹೆಬ್ರಿ-ಪೆರ್ಡೂರು-ಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ ಬಸ್ ನಿಲ್ದಾಣ ತಲುಪುವಂತೆ ಅಧಿಸೂಚನೆ ಹೊರಡಿಸಲಾಗಿರುತ್ತದೆ.

ಆದರೆ ಈಗಾಗಲೇ ಹಲವು ಬಾರಿ ಈ ಕುರಿತು ನೋಟೀಸ್ ನೀಡಿ ಪ್ರಕರಣ ದಾಖಲಿಸಿದ್ದರೂ ಕೂಡ ಅಂಬಾಗಿಲು-ಕಲ್ಪಂಕ ಮಾರ್ಗದಲ್ಲಿ ಬಸ್ಸುಗಳು ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದು ಅಂತಿಮ ಸೂಚನೆ ಎಂದು ಪರಿಗಣಿಸಿ ಸಂತೆಕಟ್ಟೆಯಿಂದ ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು-ಎನ್.ಎಚ್ 17 ಎಂದು ನಮೂದಿಸದೇ ಇರುವ ಸಿಟಿ ಬಸ್ಸುಗಳು ಮತ್ತು ಬಾರ್ಕೂರು ಬ್ರಹ್ಮಾವರ-ಹೊನ್ನಾಳ-ಹೆಬ್ರಿ- ಪೆರ್ಡೂರು-ಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು-ತಾಂಗದಗಡಿ- ಗುಂಡಿಬೈಲು-ಕಲ್ಸಂಕ ಮಾರ್ಗವಾಗಿ ಕಡ್ಡಾಯವಾಗಿ ಸಂಚರಿಸುವಂತೆ ಸಂಬಂಧಪಟ್ಟ ಎಲ್ಲಾ ಬಸ್ಸು ಮಾಲೀಕರಿಗೆ ಆದೇಶಿಸಲಾಗಿದೆ. ತಪ್ಪಿದಲ್ಲಿ ಪರವಾನಿಗೆ ರದ್ದು ಪಡಿಸಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!