Monday, February 24, 2025
Monday, February 24, 2025

ಅಂಗಡಿ ಮಾಲೀಕರು ಸ್ವಚ್ಛತೆ ಕಾಪಾಡದಿದ್ದಲ್ಲಿ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಸಿದ್ದಲ್ಲಿ ಉದ್ದಿಮೆ ಪರವಾನಿಗೆ ರದ್ದು

ಅಂಗಡಿ ಮಾಲೀಕರು ಸ್ವಚ್ಛತೆ ಕಾಪಾಡದಿದ್ದಲ್ಲಿ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಸಿದ್ದಲ್ಲಿ ಉದ್ದಿಮೆ ಪರವಾನಿಗೆ ರದ್ದು

Date:

ಉಡುಪಿ, ಜು.13: ಮಳೆಗಾಲದಲ್ಲಿ ಸಾಮಾನ್ಯವಾಗಿ ಬಾಧಿಸುವ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾದಂತಹ ಸಾಂಕ್ರಮಿಕ ರೋಗಗಳ ಬಗ್ಗೆ ಎಚ್ಚರ ವಹಿಸಿ ಮುಂಜಾಗೃತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಉದ್ದೇಶದಿಂದ ನಗರಸಭೆ ನಿರಂತರ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಗರಸಭೆ ವತಿಯಿಂದ ಸರ್ವೆಗಳನ್ನು ನಡೆಸಲಾಗುತ್ತಿದ್ದು, ಕಳೆದೆರಡು ದಿನಗಳಲ್ಲಿ ನಡೆಸಿದ ಸರ್ವೆಯಲ್ಲಿ ಅಂಗಡಿಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಯ್ದುಕೊಳ್ಳದೇ ಇದ್ದ 9 ಅಂಗಡಿಗಳ ಮಾಲೀಕರಿಗೆ ಒಟ್ಟು 8,300 ರೂ. ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ 17 ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ 46,500 ರೂ ದಂಡ ವಸೂಲಿ ಮಾಡಲಾಗಿದೆ.
ನಗರಸಭೆಯ ಎಚ್ಚರಿಕೆಯ ಹೊರತಾಗಿಯೂ ಅಂಗಡಿ ಮಾಲೀಕರು ಸುತ್ತಮುತ್ತ ಪರಿಸರ ಸ್ವಚ್ಛವಾಗಿಟ್ಟುವಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಮತ್ತು ನಿಷೇಧಿತ ಪ್ಲಾಸ್ಟಿಕ್ ಬಳಕೆ ಕಂಡು ಬಂದಲ್ಲಿ ಅಂತಹ ಅಂಗಡಿ ಮುಂಗಟ್ಟುಗಳ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!