Tuesday, September 17, 2024
Tuesday, September 17, 2024

ಕಾರ್ಕಳ ಜ್ಞಾನಸುಧಾ: ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಕಾರ್ಕಳ ಜ್ಞಾನಸುಧಾ: ವಿದ್ಯಾರ್ಥಿ ಸಂಸತ್ ಉದ್ಘಾಟನೆ

Date:

ಕಾರ್ಕಳ, ಜು.13: ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ೨೦೨೪- ೨೫ನೇ ಸಾಲಿನ ವಿದ್ಯಾರ್ಥಿ ಸಂಸತ್ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ ಹಾಗೂ ಪ್ರಾಂಶುಪಾಲ ದಿನೇಶ್.ಎಂ. ಕೊಡವೂರ್ ವಹಿಸಿದ್ದರು. ಉಪಪ್ರಾಂಶುಪಾಲೆ ವಾಣಿ ಕೆ. ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ ಅತಿಥಿಯಾಗಿದ್ದ ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ಶಾಲಾ ಸಂಸತ್ತಿನ ಪದಾಧಿಕಾರಿಗಳಿಗೆ ಪದನಾಮದ ಪದಕ ತೊಡಿಸಿ ವಿವಿಧ ನಾಯಕರ ಉದಾಹರಣೆಯ ಮೂಲಕ ಪ್ರಜಾಪ್ರಭುತ್ವದಲ್ಲಿ ನಾಯಕತ್ವದ ಮಹತ್ವದ ಕುರಿತಂತೆ ಮಾತನಾಡಿದರು. ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಪ್ರೌಢಶಾಲಾ ಅಕಾಡೆಮಿಕ್ ಅಡ್ವೆಸರ್ ಶಾರದಾ ಅಂಬರೀಶ್, ದೈಹಿಕ ಶಿಕ್ಷಕಿ ರೇಷ್ಮಾ ಸಾಲೀಸ್ ವಿದ್ಯಾರ್ಥಿ ನಾಯಕ ದೈವಿಕ್ ಶೆಟ್ಟಿ. ಉಪನಾಯಕಿ ಆಶ್ನಿ ಕೋಟ್ಯಾನ್ ಹಾಗೂ ವಿವಿಧ ವಿಭಾಗಗಳ ಸಚಿವರು, ಉಪಸಚಿವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗಣಿತ ಶಿಕ್ಷಕಿ ಆಜ್ಞಾ ಸೋಹಂ ಕಾರ್ಯಕ್ರಮ ನಿರೂಪಿಸಿ ವಂದಿಸಿದರು, ವಿದ್ಯಾರ್ಥಿನಿ ವೈಷ್ಣವಿ ಶೆಟ್ಟಿಗಾರ್ ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!