Tuesday, February 25, 2025
Tuesday, February 25, 2025

ಕೆ.ಎಂ.ಸಿ ಮಣಿಪಾಲ- ಉಚಿತ ಗ್ಲುಕೋಮಾ ತಪಾಸಣಾ ಕಾರ್ಯಕ್ರಮ

ಕೆ.ಎಂ.ಸಿ ಮಣಿಪಾಲ- ಉಚಿತ ಗ್ಲುಕೋಮಾ ತಪಾಸಣಾ ಕಾರ್ಯಕ್ರಮ

Date:

ಉಡುಪಿ: ಗ್ಲುಕೋಮಾ ಕಾಯಿಲೆಯು ಶಾಶ್ವತ ಕುರುಡುತನಕ್ಕೆ ಒಂದು ಪ್ರಮುಖ ಕಾರಣವಾಗಿದೆ. ಗ್ಲುಕೋಮಾದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಗ್ಲುಕೋಮಾ ವಾರವನ್ನು ಪ್ರತಿವರ್ಷ ಮಾರ್ಚ್ ಎರಡನೇ ವಾರದಲ್ಲಿ ವಿಶ್ವಾದ್ಯಂತ ಆಚರಿಸಲಾಗುತ್ತದೆ.

ವಿಶ್ವ ಗ್ಲುಕೋಮಾ ವಾರ 2022 ರ ಅಂಗವಾಗಿ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ  ನೇತ್ರಶಾಸ್ತ್ರ ವಿಭಾಗ ಮತ್ತು ಆಪ್ಟೋಮೆಟ್ರಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನೇತ್ರಶಾಸ್ತ್ರ ವಿಭಾಗದ ಹೊರ ರೋಗಿ ವಿಭಾಗದಲ್ಲಿ  ಉಚಿತ ಗ್ಲುಕೋಮಾ ತಪಾಸಣಾ ಶಿಬಿರದ ಉದ್ಘಾಟನೆಯನ್ನು ಆಯೋಜಿಸಿತ್ತು. 

ಈ ವರ್ಷದ ಧ್ಯೇಯ ವಾಕ್ಯ “ವಿಶ್ವ ಪ್ರಕಾಶಮಾನವಾಗಿದೆ, ನಿಮ್ಮ ದೃಷ್ಟಿಯನ್ನು ಉಳಿಸಿಕೊಳ್ಳಿ”. ಅಂದರೆ ನಿಯಮಿತ ಪರೀಕ್ಷೆಯೊಂದಿಗೆ ಜನರು ನಮ್ಮ ಸುತ್ತಲಿನ ಪ್ರಪಂಚವನ್ನು ನೋಡುತ್ತಲೇ ಇರುತ್ತಾರೆ ಎಂಬ ಭರವಸೆಯನ್ನು ಇದು ಪ್ರತಿಬಿಂಬಿಸುತ್ತದೆ.

ಮಾಹೆ ಮಣಿಪಾಲದ ಉಪಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ (ಡಾ.) ಎಂ ಡಿ ವೆಂಕಟೇಶ್ ಅವರು ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, “ವಿಶ್ವ ಗ್ಲುಕೋಮಾ ಸಪ್ತಾಹವು ವಿಶ್ವಾದ್ಯಂತ ತಡೆಗಟ್ಟಬಹುದಾದ, ಬದಲಾಯಿಸಲಾಗದ ಅಂಧತ್ವದ ಕುರಿತು ಗಮನ ಸೆಳೆಯುವ ಒಂದು ವಿಶಿಷ್ಟ ಅಭಿಯಾನವಾಗಿದೆ.

ಗ್ಲುಕೋಮಾ ಕಾಯಿಲೆ ಇರುವ ಬಗ್ಗೆ ಅರಿವೇ ಇಲ್ಲದವರು ಈ ಕಾಯಿಲೆಗೆ ಹೇಗೆ ಚಿಕಿತ್ಸೆ ಪಡೆಯಬೇಕು ಎಂದು ತಿಳಿಯದವರೂ ಸಾಕಷ್ಟಿದ್ದಾರೆ ಎಂದರು. ಆದ್ದರಿಂದ ಈ ಜಾಗೃತಿ ಕಾರ್ಯಕ್ರಮವು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಗ್ಲುಕೋಮಾ ರೋಗಿಗಳಿಗೆ ಚಿಕಿತ್ಸೆ  ನೀಡುವ ಕಾರ್ಯದ ಒಂದು ಉತ್ತಮ ಕಾರ್ಯಕ್ರಮವಾಗಿದೆ ಎಂದರು. 

ಕೆಎಂಸಿ ಮಣಿಪಾಲದ ಡೀನ್ ಡಾ. ಶರತ್ ಕುಮಾರ್ ಸ್ವಾಗತಿಸಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ  ಡಾ. ಅವಿನಾಶ್ ಶೆಟ್ಟಿ ವಂದಿಸಿದರು.

ಗ್ಲುಕೋಮಾ ಸಪ್ತಾಹ ಕಾರ್ಯಕ್ರಮಕ್ಕಾಗಿ ಶ್ರಮಿಸುತ್ತಿರುವ ಸ್ವಯಂಸೇವಕರಿಗೆ ಡಾ. ಜಿ.ಅರುಣ್ ಮಯ್ಯ , ಡೀನ್ ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್  ಅವರು ಪ್ರಶಂಸಾ ಪತ್ರ ವಿತರಿಸಿದರು.

ಡಾ. ಸುಲತಾ ಭಂಡಾರಿ ಮುಖ್ಯಸ್ಥರು, ನೇತ್ರ ಚಿಕಿತ್ಸಾ ವಿಭಾಗ ಅವರು ಗ್ಲುಕೋಮಾ ತಪಾಸಣಾ ಶಿಬಿರದ ಕುರಿತು ಅವಲೋಕನ ನೀಡಿದರು. ಆಪ್ಟೋಮೆಟ್ರಿ ವಿಭಾಗ ಮುಖ್ಯಸ್ಥರಾದ ಡಾ. ಶೋನ್ ರಾಜ್ ಬಲ್ಲೆ ಗಣೇಶ್ ರಾವ್  ಉಪಸ್ಥಿತರಿದ್ದರು.

ಗ್ಲುಕೋಮಾ ನಿರ್ವಹಣೆಯಲ್ಲಿ ಸಂಬಂಧಿಕರು ವಹಿಸುವ ಪಾತ್ರದ ಕುರಿತು ನೇತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಜಯ ಪೈ ಎಚ್ ಮತ್ತು ಸಹ ಪ್ರಾಧ್ಯಾಪಕರಾದ ಡಾ. ನೀತಾ ಕೆಐಆರ್ ಗ್ಲುಕೋಮಾವನ್ನು ಆರಂಭಿಕ ಹಂತದಲ್ಲಿ ಪತ್ತೆಯ ಮಹತ್ವದ ಕುರಿತು ಮಾತನಾಡಿದರು.

ಶಿಬಿರವು 7ನೇ ಮಾರ್ಚ್ 2022ರಿಂದ 12ನೇ ಮಾರ್ಚ್ 2022ರ ವರೆಗೆ ಬೆಳೆಗ್ಗೆ 9.00ರಿಂದ  ಸಂಜೆ 3.00 ರವರೆಗೆ ಎರಡನೇ ಮಹಡಿಯಲ್ಲಿರುವ ನೇತ್ರಶಾಸ್ತ್ರ ವಿಭಾಗದ ಹೊರ ರೋಗಿ ವಿಭಾಗದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!