Monday, February 24, 2025
Monday, February 24, 2025

ಮನೆಯೇ ಗ್ರಂಥಾಲಯ ಸುವರ್ಣ ಸಂಭ್ರಮ

ಮನೆಯೇ ಗ್ರಂಥಾಲಯ ಸುವರ್ಣ ಸಂಭ್ರಮ

Date:

ಉಡುಪಿ, ಜು. 16: ಉಡುಪಿಯ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾದ ಗಾಂಧಿ ಆಸ್ಪತ್ರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ” ಇದರ 50ರ ಸಂಭ್ರಮ ಸುವರ್ಣ ಸಂಭ್ರಮವನ್ನು ಆಚರಿಸಲಾಯಿತು.

ಪ್ರೊ. ಮುರಳೀಧರ ಉಪಾಧ್ಯ ಅವರು ಪುಸ್ತಕಗಳನ್ನು ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಹರೀಶ್ಚಂದ್ರ ಅವರಿಗೆ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರಿಗೆ ಸಂಬಂಧಪಟ್ಟ ವಿವಿಧ ಪುಸ್ತಕಗಳು ಈ ಗ್ರಂಥಾಲಯದಲ್ಲಿ ಇರಲಿ. ಇನ್ನಷ್ಟು ವ್ಯವಸ್ಥಿತ ಹಾಗೂ ವಿಶಿಷ್ಟ ರೀತಿಯಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮವನ್ನು ಆಯೋಜನೆ ಮಾಡಿ. ಆಸ್ಪತ್ರೆಗೆ ಬರುವ ಎಲ್ಲರ ಮನಸ್ಥಿತಿಗೆ ಅನುಗುಣವಾಗಿ ಪುಸ್ತಕಗಳು ಇಲ್ಲಿ ಲಭ್ಯವಾಗಲಿ. ಮಾನಸಿಕ ಆರೋಗ್ಯಕ್ಕೆ ಸಂಬಂಧಪಟ್ಟ ಪುಸ್ತಕಗಳು ಡಾ. ಪಿ ವಿ ಭಂಡಾರಿ, ಡಾ. ವಿರೂಪಾಕ್ಷ ದೇವರಮನೆ‌ಇನ್ನಿತರರು ಬರೆದ ಪುಸ್ತಕಗಳು ಇಲ್ಲಿ ಲಭ್ಯವಾಗಲಿ. ಒಳ್ಳೆಯ ಆರೋಗ್ಯಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಓದುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು. ಮೊಮ್ಮಗಳು ಬರೆದ ಮೊಬೈಲ್ ಮೈಥಿಲಿ ಪುಸ್ತಕವನ್ನು ನೀಡಿದರು.

ಡಾ. ಹರೀಶ್ಚಂದ್ರ ಅವರನ್ನು ಗೌರವಿಸಲಾಯಿತು. ಡಾ. ರಾಜಲಕ್ಷ್ಮೀ, ಡಾ. ಆಮ್ನಾ ಹೆಗ್ಡೆ, ಡಾ. ವ್ಯಾಸರಾಜ ತಂತ್ರಿ ಮಾತನಾಡಿದರು. ಹಿರಿಯರಾದ ಪ್ರೊ ಶಂಕರ್, ನಾರಾಯಣ ಮಡಿ ,ಸಂಧ್ಯಾ ಶೆಣೈ ಭವಾನಿ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!