Thursday, September 19, 2024
Thursday, September 19, 2024

ಯಕ್ಷಗಾನ ಹವ್ಯಾಸಿ ಕಲಾ ತಂಡದ ಮೂಲಕ ಹೊಸ ಕಲಾವಿದರ ಸೃಷ್ಠಿ: ಆನಂದ್ ಸಿ ಕುಂದರ್

ಯಕ್ಷಗಾನ ಹವ್ಯಾಸಿ ಕಲಾ ತಂಡದ ಮೂಲಕ ಹೊಸ ಕಲಾವಿದರ ಸೃಷ್ಠಿ: ಆನಂದ್ ಸಿ ಕುಂದರ್

Date:

ಕೋಟ, ಜು.22: ಯಕ್ಷಗಾನ ಹವ್ಯಾಸಿ ಕಲಾತಂಡದ ಮೂಲಕ ಹೊಸ ಕಲಾವಿದರ ಸೃಷ್ಠಿ ಸಾಧ್ಯ, ಯಕ್ಷಗಾನ ನಮಗೆ ಜ್ಞಾನ ವೃದ್ಧಿ ಜೊತೆಗೆ ಬದುಕಿಗೆ ಬೆಳಕು ಚೆಲ್ಲುವ ನೀತಿಗಳನ್ನು ಸಾರುತ್ತದೆ. ಮಕ್ಕಳಲ್ಲಿ ಯಕ್ಷಗಾನದ ಅಭಿರುಚಿ ಮೂಡಿಸುವ ಕೆಲಸವಾಗಬೇಕಿದೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆದ ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಯಕ್ಷಸುಮನಸ ಹವ್ಯಾಸಿ ಕಲಾರಂಗ (ರಿ) ಕೋಟ ಇವರ ಸಹಯೋಗದಲ್ಲಿ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಯಕ್ಷಗಾನ ಪ್ರಸಾಧನ ಪ್ರಮುಖರು ದಿ. ಬಾಲಕೃಷ್ಣ ನಾಯಕ್ ಹಂದಾಡಿ, ಯಕ್ಷಗಾನ ಭಾಗವತರು ದಿ. ಸುಬ್ರಹ್ಮಣ್ಯ ಧಾರೇಶ್ವರ್, ವೈದ್ಯರು ಹಾಗೂ ಗಾಯಕ ದಿ.ಡಾ. ಸತೀಶ್ ಪೂಜಾರಿ ಅವರಿಗೆ ಸುಮನಸ ನಮನ ಸಲ್ಲಿಸಲಾಯಿತು.

ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್, ಯಕ್ಷಗಾನ ಪ್ರಸಂಗಕರ್ತ ವಿಷ್ಣುಮೂರ್ತಿ ನಾಯಕ್ ಬೇಳೂರು, ಗೋವಿಗಾಗಿ ಮೇವು ಅಭಿಯಾನ ಸಂಚಾಲಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ)ಕೋಟದ ಅಧ್ಯಕ್ಷ ಸದಾನಂದ ಜಿ., ಕೋಟ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಪೂಜಾರಿ, ಗುತ್ತಿಗೆದಾರ ಸುರೇಶ್ ಗಾಣಿಗ ಶೇವಧಿ, ಉದ್ಯಮಿ ಕಿರಣ್ ತೆಕ್ಕಟ್ಟೆ, ಬಾಳೆಬೆಟ್ಟು ಫ್ರೆಂಡ್ಸ್ (ರಿ) ಬಾಳೆಬೆಟ್ಟು ಅಧ್ಯಕ್ಷ ರತ್ನಾಕರ ಪೂಜಾರಿ ಉಪಸ್ಥಿತರಿದ್ದರು. ಶಿಕ್ಷಕ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿದರು. ಯಕ್ಷಸುಮನಸ ಕಲಾರಂಗದ ಅಧ್ಯಕ್ಷ ಪ್ರಸಾದ್ ಬಿಲ್ಲವ ಪ್ರಸ್ತಾಪಿಸಿ, ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ರವೀಂದ್ರ ರಾವ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!