Sunday, September 8, 2024
Sunday, September 8, 2024

ಬಾರಕೂರು: ಗಾಳಿ ಮಳೆಗೆ ವಿದ್ಯುತ್ ಕಂಬಗಳ ಮೇಲೆ ಉರುಳಿದ ಮರ; ಸಂಚಾರ ಅಸ್ತವ್ಯಸ್ತ

ಬಾರಕೂರು: ಗಾಳಿ ಮಳೆಗೆ ವಿದ್ಯುತ್ ಕಂಬಗಳ ಮೇಲೆ ಉರುಳಿದ ಮರ; ಸಂಚಾರ ಅಸ್ತವ್ಯಸ್ತ

Date:

ಬಾರಕೂರು, ಜು. 26: (ಉಡುಪಿ ಬುಲೆಟಿನ್ ವರದಿ) ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಭಾರೀ ಗಾಳಿ ಮಳೆಯಾಗುತ್ತಿದ್ದು, ಶುಕ್ರವಾರ ಬೆಳಿಗ್ಗೆ ಗಾಳಿಗೆ ಬಾರಕೂರು ಮಂದಾರ್ತಿ ರಸ್ತೆ ಬದಿಯಲ್ಲಿ ಬೃಹತ್ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಈ ಭಾಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಬಾರಕೂರು ರೈಲು ನಿಲ್ದಾಣದ ಬಳಿ ಘಟನೆ ಸಂಭವಿಸಿದ್ದು ಸ್ಥಳೀಯ ಸಂಘಟನೆಯ ಸದಸ್ಯರು ಮತ್ತು ಮೆಸ್ಕಾಂ ಸಿಬ್ಬಂದಿ ರಸ್ತೆಯಲ್ಲಿ ಉರುಳಿದ ಮರಗಳನ್ನು ತೆರವುಗೊಳಿಸಿ ಸಂಚಾರ ಆರಂಭಗೊಳ್ಳಲು ಸಹಕರಿಸಿದರು.

ಏನಾಗಿತ್ತು?: ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ ಶುಕ್ರವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಜೋರಾಗಿ ಬೀಸಿದ ಗಾಳಿಗೆ ಬಾರಕೂರು ರೈಲು ನಿಲ್ದಾಣದ ಬಳಿಯ ಮಂದಾರ್ತಿ ರಸ್ತೆಯ ಬಳಿ ಹಲವಾರು ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿದ ಪರಿಣಾಮ ಸಂಚಾರ ಅಸ್ತವ್ಯಸ್ತವಾಯಿತು.

ತಪ್ಪಿದ ದುರಂತ: ರಸ್ತೆಯ ಮೇಲೆ ವಿದ್ಯುತ್ ತಂತಿ ಸಮೇತ ಮರಗಳು ಉರುಳಿ ಬೀಳುವ ಸಮಯದಲ್ಲಿ ಮುಖ್ಯ ರಸ್ತೆಯಲ್ಲಿ ಯಾವುದೇ ವಾಹನ ಸಂಚರಿಸದ ಪರಿಣಾಮ ಯಾವುದೇ ಜೀವಹಾನಿ ಆಗಲಿಲ್ಲ ಎನ್ನುತ್ತಾರೆ ಸ್ಥಳೀಯರು.

ಸುರಿಯುವ ಮಳೆಯಲ್ಲೇ ತೆರವು ಕಾರ್ಯಾಚರಣೆ: ರಸ್ತೆಗೆ ತಂತಿಗಳ ಜತೆ ಉರುಳಿದ ಮರಗಳನ್ನು ತೆರವುಗೊಳಿಸಲು ಸ್ಥಳೀಯ ಸಂಘಟನೆಯ ಸದಸ್ಯರು ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರು ಜತೆಗೂಡಿ ಸುರಿಯುವ ಮಳೆಯಲ್ಲೇ ತೆರವು ಕಾರ್ಯಾಚರಣೆ ನಡೆಸಿ ಸಂಚಾರ ಆರಂಭವಾಗಲು ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಕ್ಕೆ ಶಿಕ್ಷಕರ ಸೇವೆ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ...

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್...

18ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ

ಬೆಳ್ಮಣ್, ಸೆ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮದ್ಯ ಮಾರಾಟ ನಿಷೇಧ

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ...
error: Content is protected !!