Sunday, February 23, 2025
Sunday, February 23, 2025

ಕೊರಗ ಸಮುದಾಯದ ಬೇಡಿಕೆಗಳು ನ್ಯಾಯಸಮ್ಮತವಾಗಿವೆ: ಶಾಸಕ ಯಶ್ಪಾಲ್ ಸುವರ್ಣ

ಕೊರಗ ಸಮುದಾಯದ ಬೇಡಿಕೆಗಳು ನ್ಯಾಯಸಮ್ಮತವಾಗಿವೆ: ಶಾಸಕ ಯಶ್ಪಾಲ್ ಸುವರ್ಣ

Date:

ಮಣಿಪಾಲ, ಜು.28: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ), ಕರ್ನಾಟಕ – ಕೇರಳ ಇವರ ವತಿಯಿಂದ ಕೊರಗ ಸಮುದಾಯದ ಜನರ ಉದ್ಯೋಗ ಭರವಸೆ ಈಡೇರಿಕೆ ಹಾಗೂ ಕೃಷಿ ಭೂಮಿ ಹಕ್ಕು ಪತ್ರ ಮಂಜೂರಾತಿ ಮಾಡುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಸಮುದಾಯದ ಬೇಡಿಕೆಗಳ ಬಗ್ಗೆ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ, ಕೊರಗ ಸಮುದಾಯದ ಬೇಡಿಕೆಗಳು ನ್ಯಾಯ ಸಮ್ಮತವಾಗಿದ್ದು, ಬೇಡಿಕೆಗಳ ಈಡೇರಿಕೆ ಶಾಸಕನಾಗಿ ನನ್ನ ಕರ್ತವ್ಯವಾಗಿದ್ದು, ಈ ಬಗ್ಗೆ ಪ್ರಾಮಾಣಿಕ ಪ್ರಯತ್ನದ ಭರವಸೆ ನೀಡಿದರು.

ಈಗಾಗಲೇ ಕೊರಗ ಸಮುದಾಯದ ಪ್ರತಿಭಟನೆಯ ಬಗ್ಗೆ ಸ್ಪೀಕರ್ ಯು. ಟಿ. ಖಾದರ್ ರವರ ಮೂಲಕ ಸರಕಾರದ ಗಮನಕ್ಕೆ ತಂದಿದ್ದು, ಮೊನ್ನೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಲು ಮುಂದಾಗಿದ್ದರೂ, ಕಲಾಪವನ್ನು ಗುರುವಾರ ಮೊಟಕುಗೊಳಿಸಿದ ಪರಿಣಾಮ ಸದನದಲ್ಲಿ ಚರ್ಚಿಸಲು ಸಾಧ್ಯವಾಗಿಲ್ಲ. ಸೋಮವಾರ ಸಮುದಾಯದ ಪ್ರಮುಖರೊಂದಿಗೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿ, ಅತೀ ಶೀಘ್ರದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಎಲ್ಲಾ ಶಾಸಕರು ಜೊತೆಗೂಡಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!