Saturday, September 21, 2024
Saturday, September 21, 2024

ತೋಟಗಾರಿಕೆ ಬೆಳೆ ಬೆಳೆಯಲು ಸಹಾಯಧನ

ತೋಟಗಾರಿಕೆ ಬೆಳೆ ಬೆಳೆಯಲು ಸಹಾಯಧನ

Date:

ಉಡುಪಿ, ಜು.29: ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಗೇರು, ಅಂಗಾಂಶ ಬಾಳೆ, ಕಾಳುಮೆಣಸು, ಕೋಕೋ, ಹಲಸು, ಜಾಯಿಕಾಯಿ, ರಾಮ್ ಬೂತಾನ್, ಡ್ರಾಗನ್ ಪ್ರೂಟ್ ಮತ್ತು ಮಲ್ಲಿಗೆ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಕೃಷಿ ಜಮೀನು ಹಾಗೂ ಉದ್ಯೋಗ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಜನಾಂಗ, ಬುಡಕಟ್ಟು ಜನಾಂಗ, ಬಡತನ ರೇಖೆಗಿಂತ ಕಡಿಮೆ ಇರುವ ಕುಟುಂಬ, ಸ್ತ್ರೀ ಪ್ರಧಾನ ಕುಟುಂಬ, ವಿಕಲ ಚೇತನ ಪ್ರಧಾನ ಕುಟುಂಬ, ಭೂ ಸುಧಾರಣಾ ಫಲಾನುಭವಿಗಳು, ಇಂದಿರಾ ಆವಾಜ್ ಯೋಜನೆ ಫಲಾನುಭವಿಗಳು, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳು ಹಾಗೂ ಸಣ್ಣ ಮತ್ತು ಅತೀ ಸಣ್ಣ ರೈತರು ಸದರಿ ಯೋಜನೆಯಡಿ ಮಾರ್ಗಸೂಚಿಯಂತೆ ಹೊಸ ತೋಟಗಳನ್ನು ನಿರ್ಮಾಣ ಮಾಡಿ, ಕೂಲಿ ಹಾಗೂ ಸಾಮಾಗ್ರಿ ವೆಚ್ಚವನ್ನು ಸಹಾಯಧನದ ರೂಪದಲ್ಲಿ ಪಡೆಯಬಹುದಾಗಿರುತ್ತದೆ.

ಆಸಕ್ತ ರೈತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತ್ ಅಥವಾ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!