Sunday, February 23, 2025
Sunday, February 23, 2025

ಸಮೃದ್ಧಿ ಮಹಿಳಾ ಮಂಡಳಿ (ರಿ) ಪೇತ್ರಿ ಚೇರ್ಕಾಡಿ: ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

ಸಮೃದ್ಧಿ ಮಹಿಳಾ ಮಂಡಳಿ (ರಿ) ಪೇತ್ರಿ ಚೇರ್ಕಾಡಿ: ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Date:

ಬ್ರಹ್ಮಾವರ, ಆ.1: ಸಮೃದ್ಧಿ ಮಹಿಳಾ ಮಂಡಳಿ (ರಿ) ಪೇತ್ರಿ ಚೇರ್ಕಾಡಿ ಆಷಾಢದಲ್ಲಿ ಒಂದು ದಿನ ಹಾಗೂ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ಸಮೃದ್ಧಿ ಮಹಿಳಾ ಮಂಡಲದಲ್ಲಿ ಜರಗಿತು. ಸಮೃದ್ಧಿ ಸಂಜೀವಿನಿ ಸಂಘದ ಅಧ್ಯಕ್ಷರಾದ ಯಶೋಧ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾರಾಯಣ ನಾಯ್ಕ್, ನಮ್ಮ ಪೂರ್ವಜರ ಜೀವನ ಪದ್ಧತಿ ಆಹಾರ ಕ್ರಮ ನೆನಪಿಸಿಕೊಂಡರು. ತಾಲೂಕು ಸಂಜೀವಿನಿ ಸಂಪನ್ಮೂಲ ವ್ಯಕ್ತಿ ಹೇಮಾ ಜಗನ್ನಾಥ್, ಆಷಾಢದಲ್ಲಿ ಉಪಯೋಗಿಸುವ ಪ್ರಾಕೃತಿಕ ಸಸ್ಯಗಳ ಔಷಧಿ ಗುಣಗಳ ಬಗ್ಗೆ ಮಾಹಿತಿ ನೀಡಿದರು.

ಪೇತ್ರಿ ಸಮುದಾಯ ಆರೋಗ್ಯ ಅಧಿಕಾರಿ ಜ್ಯೋತಿ, ಪರಿಸರ ಸ್ವಚ್ಛತೆ ಡೆಂಗ್ಯೂ ಬಗ್ಗೆ ಮುನ್ನೆಚ್ಚರಿಕೆ ಹಾಗೂ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. 10ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಹಿಳಾ ಮಂಡಲದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಮಹಿಳಾ ಮಂಡಲದ ಅಧ್ಯಕ್ಷೆ, ಲತಾ ಡಿ ಶೆಟ್ಟಿ ಸ್ವಾಗತಿಸಿದರು.

ಪ್ರತಿಮಾ ಆಚಾರ್ಯ ಆಷಾಢ ತಿನಿಸುಗಳ ಪಟ್ಟಿ ವಾಚಿಸಿದರು. ಕೋಶಾಧಿಕಾರಿ ಅರ್ಚನಾ ಭಟ್ ವಂದಿಸಿ, ಕಾರ್ಯದರ್ಶಿ ಶಾರದಾ ಎಂ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!