Monday, February 24, 2025
Monday, February 24, 2025

ಸ್ಟೆಲ್ಲಾ ಮಾರಿಸ್‌ ದೇವಾಲಯ ಕಲ್ಮಾಡಿ: ವಾರ್ಷಿಕ ಮಹೋತ್ಸವ

ಸ್ಟೆಲ್ಲಾ ಮಾರಿಸ್‌ ದೇವಾಲಯ ಕಲ್ಮಾಡಿ: ವಾರ್ಷಿಕ ಮಹೋತ್ಸವ

Date:

ಉಡುಪಿ, ಆ.1: ಸ್ಟೆಲ್ಲಾ ಮಾರಿಸ್‌ ದೇವಾಲಯ ಕಲ್ಮಾಡಿ ಇಲ್ಲಿರುವ ವೆಲಂಕಣಿ ಮಾತೆಯ ಕೇಂದ್ರವನ್ನು 15 ಅಗಸ್ಟ್‌ 2022 ರಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಜೆರಾಲ್ಡ್‌ ಐಸಾಕ್‌ ಲೋಲೋ ರವರು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವಾಗಿ ಘೋಷಿಸಿದರು. ಪ್ರತಿ ವರ್ಷದಂತೆ ಈ ಬಾರಿ ಕೂಡ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು 15 ಅಗಸ್ಟ್‌ 2024 ಗುರುವಾರ ದಂದು ನಡೆಯಲಿರುವುದು. ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಒಂಬತ್ತು ದಿನಗಳ ನವೇನಾ ಪ್ರಾರ್ಥನೆಗಳು 06-08-2024 ರಿಂದ 14-08-2024 ರ ವರೆಗೆ ಸಾಯಂಕಾಲ 4:00 ಗಂಟೆಗೆ ನಡೆಯಲಿರುವುದು. 06-08-2024 ಮಂಗಳವಾರದಂದು ಸಾಯಂಕಾಲ 3:45 ಗಂಟೆಗೆ ಮಂಗಳೂರು ಧರ್ಮಪ್ರಾಂತ್ಯದ ವಿಕಾರ್‌ ಜೆರಾಲ್‌ ಆಗಿರುವ ಮೊನ್ಸಿ. ಲಾರೆನ್ಸ್‌ ಮ್ಯಾಕ್ಸಿಮ್‌ ನೊರೋನ್ಹಾ ರವರು ಪುಣ್ಯಕ್ಷೇತ್ರದ ಬಾವುಟವನ್ನು ಹಾರಿಸುವ ಮೂಲಕ ನವೇನಾ ಪ್ರಾರ್ಥನೆಗಳಿಗೆ ಚಾಲನೆ ನೀಡಲಿರುವರು.

11-08-2024 ಭಾನುವಾರದಂದು ಮಧ್ಯಾನ್ಹ 2:30 ಗಂಟೆಗೆ ಕಲ್ಮಾಡಿ ಸೇತುವೆಯಿಂದ ಕಲ್ಮಾಡಿ ದೇವಾಲಯದ ವರೆಗೆ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ನಡೆಯಲಿರುವುದು. ಅಂದು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾಗಿರುವ ಅತೀ ವಂದನೀಯ ಡಾ. ಲುವಿಸ್‌ ಪಾವ್ಲ್‌ ಡಿʼಸೋಜಾ ರವರು ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಚಾಲನೆ ನೀಡಲಿರುವರು. 15 ಅಗಸ್ಟ್‌ 2024 ಗುರುವಾರ ದಂದು ಬೆಳಗ್ಗೆ 10:30 ಗಂಟೆಗೆ ದಿವ್ಯ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಜೆರಾಲ್ಡ್‌ ಐಸಾಕ್‌ ಲೋಲೋ ರವರು ನೆರೆವೇರಿಸಲಿರುವರು. ಉಡುಪಿ ಧರ್ಮಪ್ರಾಂತ್ಯದ ಅನೇಕ ಧರ್ಮಗುರುಗಳು ಹಾಗೂ ಸಾವಿರಾರು ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು. ಅಂದು ಬೆಳಗ್ಗೆ 7:30 ಹಾಗೂ ಸಾಯಂಕಾಲ 4:00 ಗಂಟೆಗೆ ಕೊಂಕಣಿ ಭಾಷೆಯಲ್ಲಿ ಹಾಗೂ ಸಾಯಂಕಾಲ 6:00 ಗಂಟೆಗೆ ಇಂಗ್ಲೀಷ್ ಭಾಷೆಯಲ್ಲಿ ಇತರೆ ಬಲಿಪೂಜೆಗಳನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!