Sunday, February 23, 2025
Sunday, February 23, 2025

ವಿದ್ಯಾಭಾರತಿ: ಯೋಗಾಸನ ಸ್ಪರ್ಧೆ

ವಿದ್ಯಾಭಾರತಿ: ಯೋಗಾಸನ ಸ್ಪರ್ಧೆ

Date:

ಸಿದ್ದಾಪುರ, ಆ.9: ಯೋಗಾಸನ ಕೇವಲ ಆಸನವಲ್ಲ, ಅದು ದೇಹ ಮತ್ತು ಮನಸ್ಸುಗಳನ್ನು ಸೀಮಿತವಾಗಿಡುವ ಸಾಧನ. ಯೋಗ ವಿಚಾರ ಪುರಾಣಗಳಲ್ಲಿ ಉಲ್ಲೇಖವಿದೆ. ಯೋಗದ ಆರಾಧ್ಯ ದೈವ ಶಿವನಾಗಿರುತ್ತಾನೆ. ಯೋಗ ಗುರು ಪತಂಜಲಿ ಇದನ್ನು ಜಗತ್ತಿಗೆ ಬರೆಹ ರೂಪದಲ್ಲಿ ನೀಡಿದರು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಶೇಖರ ಶೆಟ್ಟಿಗಾರ ಹೇಳಿದರು. ಸಿದ್ದಾಪುರದ ಸರಸ್ವತಿ ವಿದ್ಯಾಲಯ ಸಭಾಂಗಣದಲ್ಲಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಮತ್ತು ಸರಸ್ವತಿ ವಿದ್ಯಾಲಯ ಸಿದ್ದಾಪುರ ಜಂಟಿ ಆಶ್ರಯದಲ್ಲಿ ನಡೆದ ಪ್ರಾಂತ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ವೇದಿಕೆಯಲ್ಲಿ ಸರಸ್ವತಿ ವಿದ್ಯಾಲಯ ಸಿದ್ದಾಪುರ ಆಡಳಿತ ಮಂಡಳಿಯ ಅಧ್ಯಕ್ಷ ಗೋಪಾಲಕೃಷ್ಣ ಕಾಮತ್, ಆಡಳಿತ ಮಂಡಳಿಯ ಸದಸ್ಯ ಶ್ರೀನಾಥ್ ಪೈ, ವಿದ್ಯಾಭಾರತಿ ಕರ್ನಾಟಕ ಪ್ರಾಂತ ಯೋಗ ಶಿಕ್ಷಣ ಪ್ರಮುಖ್ ಮಂಜುನಾಥ ಬೆಂಗಳೂರು, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಅಧ್ಯಕ್ಷ ಪಾಂಡುರಂಗ ಪೈ, ಕಾರ್ಯದರ್ಶಿ ಮಹೇಶ ಹೈಕಾಡಿ, ಜಿಲ್ಲಾ ಯೋಗ ಪ್ರಮುಖ್ ಸಂಜಯ್, ಅಂಪಾರು ವಲಯದ ಶಿಕ್ಷಣ ಸಂಯೋಜಕ ಶಂಕರ್ ಯು., ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ವೇತಾ, ಆಡಳಿತಾಧಿಕಾರಿ ಸೌಭಾಗ್ಯ, ಸರಸ್ವತಿ ಶಿಶು ಮಂದಿರದ ಸಂಯೋಜಕಿ ಜಯಶೀಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾಂತ ಯೋಗಾಸನ ಸ್ಪರ್ಧೆ ತೀರ್ಪುಗಾರರಾಗಿ ರಾಷ್ಟ್ರೀಯ ಯೋಗಾಸನ ತೀರ್ಪುಗಾರ ಅಶೋಕ, ಸವಿತಾ, ಸಬಿತ, ಅಮಿತ್, ಸುಜಾತ ಶೆಟ್ಟಿ, ಸಂಜೀವ್ ಮೊಗವೀರ, ಚೆನ್ನಮ್ಮ, ನವೀನ್, ಸುಮಾ, ಶರತ್ ಸಹಕರಿಸಿದರು. ವೀರೇಶ, ಪ್ರವೀಣ್, ನಮಿತಾ ಯೋಗಾಸನ ಸ್ಪರ್ಧೆಯ ಅಂಕಣ ನಿರ್ವಹಣೆ ಮಾಡಿದರು. ವಿದ್ಯಾರ್ಥಿಗಳು ಯೋಗ-ಯಕ್ಷಗಾನ ಸಮ್ಮಿಲನದ ಸಾಂಸ್ಕೃತಿಕ ಪ್ರದರ್ಶನ ನೀಡಿದರು. ಪ್ರಾಂತ ಯೋಗಾಸನ ಸ್ಪರ್ಧೆಯಲ್ಲಿ ಬೆಳಗಾವಿ, ಬೆಂಗಳೂರು, ಶಿವಮೊಗ್ಗ, ಮಂಗಳೂರು, ಉಡುಪಿ, ಕಲಬುರ್ಗಿ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದರು. ಮಾತಾಜಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!