Friday, September 20, 2024
Friday, September 20, 2024

ವಿಶ್ವಶಾಂತಿಗೆ ಜಿನೇವಾ ಒಪ್ಪಂದದ ಕೊಡುಗೆ ಅಪಾರ: ಡಾ. ಪ್ರಸಾದ್ ರಾವ್

ವಿಶ್ವಶಾಂತಿಗೆ ಜಿನೇವಾ ಒಪ್ಪಂದದ ಕೊಡುಗೆ ಅಪಾರ: ಡಾ. ಪ್ರಸಾದ್ ರಾವ್

Date:

ಉಡುಪಿ, ಆ.14: 1864 ರ ಜಿನೇವಾ ಒಪ್ಪಂದವು ವಿಶ್ವ ಶಾಂತಿಗೆ ನೀಡಿದ ಕೊಡುಗೆ ಮಹತ್ವದ್ದಾಗಿದೆ. ಎಲ್ಲಾ ದೇಶಗಳ ಸೈನಿಕರಿಗೆ ಆರೈಕೆ ಹಾಗೂ ಮೃತ ಸೈನಿಕರಿಗೆ ಗೌರವಯುತವಾದ ಅಂತ್ಯ ಸಂಸ್ಕಾರಕ್ಕೆ ದೇಶಗಳು ಒಡಂಬಡಿಕೆಗೆ ಬಂದ ಮಹತ್ವದ
ಒಪ್ಪಂದಗಳು ಜಿನೇವಾ ಒಪ್ಪಂದಗಳಾಗಿವೆ. ಸೆರೆಯಾದ ಸೈನಿಕರನ್ನು ಸಂಬಂಧಿಸಿದ ದೇಶಗಳಿಗೆ ಒಪ್ಪಿಸಲು ಈ ಒಪ್ಪಂದವು ಕಾರಣವಾಗಿದೆ. ರೆಡ್ ಕ್ರಾಸ್‌ನ ಉದಯಕ್ಕೆ ಈ ಒಪ್ಪಂದವು ಮೂಲ ಕಾರಣವಾಗಿದೆ ಎಂದು ಚಿಂತಕ ಮತ್ತು ರಂಗತಜ್ಞ ಡಾ. ಪ್ರಸಾದ್ ರಾವ್ ಹೇಳಿದರು. ಅವರು ಸೋಮವಾರ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ವಿಶ್ವಶಾಂತಿಗಾಗಿ ಜಿನೇವಾ ಒಪ್ಪಂದದ ಸ್ಮರಣೆ ಎಂಬ ವಿಷಯದ ಬಗ್ಗೆ ನಡೆದ ವಿಚಾರ ಸಂಕಿರಣದಲ್ಲಿ ಉಪನ್ಯಾಸ ನೀಡಿ ಮಾತನಾಡುತ್ತಿದ್ದರು.

ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಸಂಯೋಜಕಿ ಡಾ. ದಿವ್ಯಾ ಎಂ.ಎಸ್, ರೆಡ್‌ಕ್ರಾಸ್ ಅಧಿಕಾರಿಗಳಾದ ರೇಖಾ ಮತ್ತು ಡಾ. ರಾಘವೇಂದ್ರ ಎಲ್ ಹಾಗೂ ಜಿಲ್ಲೆಯ ವಿವಿಧ ಕಾಲೇಜುಗಳ ರೆಡ್‌ಕ್ರಾಸ್ ಸ್ವಯಂ ಸೇವಕ- ಸೇವಕಿಯರು ಉಪಸ್ಥಿತರಿದ್ದರು. ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ, ನಿರ್ವಹಿಸಿದರು. ಖಜಾಂಚಿ ರಮಾದೇವಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!