Thursday, October 24, 2024
Thursday, October 24, 2024

ಕೊಡವೂರು ಗಣೇಶೋತ್ಸವ: ಸ್ಪರ್ಧೆಗಳಿಗೆ ಚಾಲನೆ

ಕೊಡವೂರು ಗಣೇಶೋತ್ಸವ: ಸ್ಪರ್ಧೆಗಳಿಗೆ ಚಾಲನೆ

Date:

ಉಡುಪಿ, ಆ.26: ಕೊಡವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಆಚರಿಸಲ್ಪಡುವ 56 ನೇ ಗಣೇಶೋತ್ಸವದ ಪ್ರಯುಕ್ತ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಮಹಿಳೆಯರಿಗೆ ರಂಗವಲ್ಲಿ ಸ್ಪರ್ಧೆ ಶ್ರೀ ಶಂಕರನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು. ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸಾಧು ಸಾಲ್ಯಾನ್ ಉದ್ಘಾಟಿಸಿದರು. ಮುಖ್ಯ ಅತಿಥಿ ಸಾಹಿತಿ ಪೂರ್ಣಿಮಾ ಜನಾರ್ದನ್ ಮಾತನಾಡಿ, ಮಕ್ಕಳಲ್ಲಿ ಅಂತರ್ಗತವಾಗಿರುವ ಪ್ರತಿಭೆಯ ಅನಾವರಣಕ್ಕೆ ಇಂತಹ ಸ್ಪರ್ಧಾ ಕಾರ್ಯಕ್ರಮಗಳು ಉತ್ತೇಜನಕಾರಿಯಾಗಿದೆ ಹಾಗೂ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪೂರಕ ವಾತಾವರಣ ಸೃಷ್ಟಿಸಬಲ್ಲದು ಎಂದರು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೃಷ್ಣ ದೇವಾಡಿಗ, ಕೋಶಾಧಿಕಾರಿ ವಾದಿರಾಜ್ ಟಿ ಸಾಲ್ಯಾನ್ ಉಪಸ್ಥಿತರಿದ್ದರು. ಕಳೆದ 20 ವರ್ಷಗಳಿಂದ ನಿರಂತರವಾಗಿ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಸಹಕರಿಸುತ್ತಿರುವ ಹಿರಿಯ ಚಿತ್ರ ಕಲಾವಿದ ತಾರಾನಾಥ್ ತೊಟ್ಟಂ, ಸಂಗೀತ ಕಲಾವಿದ
ಸುನೀಲ್ ಕುಮಾರ್ ಅಂಬಲಪಾಡಿ ಇವರನ್ನು ಗೌರವಿಸಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಚಂದ್ರಾವತಿ ಕಾನಂಗಿ ಮಹಿಳೆಯರ ರಂಗವಲ್ಲಿ ಸ್ಪರ್ಧೆಗೆ ಚಾಲನೆ ನೀಡಿದರು. ಸತೀಶ್ ಕೊಡವೂರು ಸ್ವಾಗತಿಸಿ ನಿರೂಪಿಸಿದರು. ಜಗದೀಶ್ ಶೆಟ್ಟಿ ಬೆಳ್ಕಳೆ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಗೆಲುವು

ಉಡುಪಿ, ಅ.24: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ...

ಗಣೇಶ ಪ್ರಸಾದ್ ಕೊಡಿಬೆಟ್ಟುಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಟಪಾಡಿ, ಅ.24: ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಕೊಡಿಬೆಟ್ಟು...

11 ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ

ಬೆಂಗಳೂರು, ಅ.24: ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ...

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರು, ಅ.24: ಬಹು ದಿನಗಳ ಬೇಡಿಕೆಯಾಗಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ...
error: Content is protected !!