ಉಡುಪಿ: ನಾಡೋಜ ಡಾ. ಜಿ. ಶಂಕರ್ ರವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ಹಿರಿಯಡಕ ಘಟಕದ ನೂತನ ಅಧ್ಯಕ್ಷರಾಗಿ ಮಹೇಶ್ ಪುತ್ರನ್ ಹಿರೇಬೆಟ್ಟು ರವರು ಅವಿರೋಧವಾಗಿ ಆಯ್ಕೆಯಾದರು.
ಕೃತಿಕ್ ಸಾಲಿಯಾನ್ ಬಜೆ ಕಾರ್ಯದರ್ಶಿಯಾಗಿ, ಪ್ರಶಾಂತ್ ಮದಗ ಜೊತೆ ಕಾರ್ಯದರ್ಶಿಯಾಗಿ, ಪ್ರಕಾಶ್ ಕೌಡೂರು ಕೋಶಾಧಿಕಾರಿಯಾಗಿ ಆಯ್ಕೆಯಾದರು. ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಸಭೆಯಲ್ಲಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ನೂತನ ಪದಾಧಿಕಾರಿಗಳ ಪದ ಪ್ರಧಾನ ಸಂಮಾರಂಭವು ಮಾರ್ಚ್ 20 ರ ಭಾನುವಾರ ಪೂರ್ವಾಹ್ನ 11.00 ಗಂಟೆಗೆ ಹಿರಿಯಡ್ಕ ಅಂಜಾರು ಮಾಧವ ಮಂಗಲ ಸಭಾಭವನದಲ್ಲಿ ನಡೆಯಲಿದೆ.




By
ForthFocus™