Sunday, February 8, 2026
Sunday, February 8, 2026

ತ್ರೋಬಾಲ್‌: ಆನಂದತೀರ್ಥ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ತ್ರೋಬಾಲ್‌: ಆನಂದತೀರ್ಥ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Date:

ಕಟಪಾಡಿ, ಆ.28: ಉಡುಪಿ ಜಿಲ್ಲಾ ಸಿ.ಬಿ.ಎಸ್‌.ಇ ಮತ್ತು ಐ.ಸಿ.ಎಸ್.ಇ ಶಾಲಾ ಸಂಘಟನೆಯ (ಐಕ್ಸ್) (ಆಲ್‌ ಇಂಡಿಯಾ ಕೌನ್ಸಿಲ್ ಆಫ್‌ ಸ್ಪೋಟ್ಸ್) ವತಿಯಿಂದ ಉಡುಪಿಯ ಸೇಂಟ್‌ ಸಿಸಿಲಿ ಇಂಗ್ಲೀಷ್‌ ಮೀಡಿಯಂ ಶಾಲೆಯಲ್ಲಿ ನಡೆದ ತ್ರೋಬಾಲ್‌ ಪಂದ್ಯಾಟದಲ್ಲಿ ಪಾಜಕ ಅನಂದತೀರ್ಥ ವಿದ್ಯಾಲಯದ ವಿದ್ಯಾರ್ಥಿಗಳು ವಿಶಿಷ್ಟ ಸಾಧನೆ ಮಾಡಿದ್ದು, 17 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ, 14 ವರ್ಷ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ, ಹಾಗೂ ಇದೇ ವಿಭಾಗದ ಬಾಲಕೀಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಸಮಗ್ರ ಜಾಂಪಿಯನ್‌ ಸ್ಥಾನ ಪಡೆದಿರುತ್ತಾರೆ. 17 ವರ್ಷ ವಯೋಮಾನದಲ್ಲಿ ಬೆಸ್ಟ್‌ ರಿಸೀವರ್‌ ಆಗಿ ಸಂಗಮೇಶ್‌, ಬೆಸ್ಟ್‌ ಸರ್ವರ್‌ ಆಗಿ ಅನಿರುದ್ಧ ಜೋಷಿ, 14 ವರ್ಷದ ವಯೋಮಾನದಲ್ಲಿ ಬಾಲಕರ ವಿಭಾಗದಲ್ಲಿ ಆಲ್‌ರೌಂಡರ್‌ ಆಗಿ ಅನೀಶ್‌, ಬಾಲಕೀಯರ ವಿಭಾಗದಲ್ಲಿ ಧನುಶ್ರೀ ವಯಕ್ತಿಕ ಪ್ರಶಸ್ತಿ ಪಡದರು.

ಉಡುಪಿ ಜಿಲ್ಲೆಯ ಸುಮಾರು 20 ಶಾಲೆಗಳು ಪಾಲ್ಗೊಂಡಿದ್ದ ಈ ಕ್ರೀಡಾ ಕೂಟದಲ್ಲಿ ಆನಂದತೀರ್ಥ ವಿದ್ಯಾಲಯದ ವಿದ್ಯಾರ್ಥಿಗಳ ಈ ಸಾಧನೆಗೆ ತರಬೇತಿ ನೀಡಿದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್‌ ಕುಮಾರ್‌ ಶೆಟ್ಟಿ, ಕಲ್ಮೇಶ್‌, ಸುಮನಾ, ಸಚಿನ್, ಮಮತಾ, ದುರ್ಗಪ್ಪ ಹಾಗೂ ವಿದ್ಯಾಲಯ ಪ್ರಾಂಶುಪಾಲೆ ಡಾ. ಗೀತಾ ಶಶಿದರ್‌ ಹಾಗೂ ಕ್ರೀಡೆಯಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯ ಸದಸ್ಯರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!