Monday, February 24, 2025
Monday, February 24, 2025

ಪ್ರಧಾನಮಂತ್ರಿ ವಿಶ್ವಕರ್ಮ ತರಬೇತಿ: ಪ್ರಮಾಣಪತ್ರ ವಿತರಣೆ

ಪ್ರಧಾನಮಂತ್ರಿ ವಿಶ್ವಕರ್ಮ ತರಬೇತಿ: ಪ್ರಮಾಣಪತ್ರ ವಿತರಣೆ

Date:

ಉಡುಪಿ, ಆ.29: ಪ್ರಧಾನಮಂತ್ರಿ ವಿಶ್ವಕರ್ಮ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಸಮಾರಂಭವು ಬುಧವಾರ ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ, ವಿಶ್ವಕರ್ಮ ಯೋಜನೆಯ ಮಾಹಿತಿಯನ್ನು ನೀಡುವುದರೊಂದಿಗೆ ಕುಶಲಕರ್ಮಿಗಳು ವಿಶ್ವಕರ್ಮ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿ, ಅಧಿಕಾರಿಗಳ ಪರಿಶ್ರಮದಿಂದ ಮಾತ್ರ ವಿಶ್ವಕರ್ಮ ಯೋಜನೆಯು ಸಫಲ ಹೊಂದಿ ಫಲಾನುಭವಿಗಳಿಗೆ ತಲುಪಲು ಸಾಧ್ಯ ಎಂದರು.

ಮೈಸೂರು ವಿಭಾಗೀಯ ಕಛೇರಿ ಜಂಟಿ ನಿರ್ದೇಶಕಿ ಮಂಜುಳಾ ಎಸ್., ಅಲೆವೂರು ಪಂಚಾಯತಿ ಅಧ್ಯಕ್ಷ ಯತೀಶ್ ಕುಮಾರ್, ಐ.ಎಂ.ಸಿ ಅಧ್ಯಕ್ಷ ವಿಶ್ವನಾಥ ಭಟ್, ಪಂಚಾಯತ್ ಸದಸ್ಯ ನಾಗರಾಜ್, ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಚಾರ್ಯ ಶಿವಕುಮಾರ್ ಎಸ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಪೂರ್ಣಿಮಾ ರಾವ್ ಕೆ ನಿರೂಪಿಸಿ, ಸಂಸ್ಥೆಯ ತರಬೇತಿ ಅಧಿಕಾರಿ ಭಾಸ್ಕರ್ ಎಂ.ಆರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!