Wednesday, October 23, 2024
Wednesday, October 23, 2024

ಪ್ರಧಾನಮಂತ್ರಿ ವಿಶ್ವಕರ್ಮ ತರಬೇತಿ: ಪ್ರಮಾಣಪತ್ರ ವಿತರಣೆ

ಪ್ರಧಾನಮಂತ್ರಿ ವಿಶ್ವಕರ್ಮ ತರಬೇತಿ: ಪ್ರಮಾಣಪತ್ರ ವಿತರಣೆ

Date:

ಉಡುಪಿ, ಆ.29: ಪ್ರಧಾನಮಂತ್ರಿ ವಿಶ್ವಕರ್ಮ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಸಮಾರಂಭವು ಬುಧವಾರ ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ, ವಿಶ್ವಕರ್ಮ ಯೋಜನೆಯ ಮಾಹಿತಿಯನ್ನು ನೀಡುವುದರೊಂದಿಗೆ ಕುಶಲಕರ್ಮಿಗಳು ವಿಶ್ವಕರ್ಮ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿ, ಅಧಿಕಾರಿಗಳ ಪರಿಶ್ರಮದಿಂದ ಮಾತ್ರ ವಿಶ್ವಕರ್ಮ ಯೋಜನೆಯು ಸಫಲ ಹೊಂದಿ ಫಲಾನುಭವಿಗಳಿಗೆ ತಲುಪಲು ಸಾಧ್ಯ ಎಂದರು.

ಮೈಸೂರು ವಿಭಾಗೀಯ ಕಛೇರಿ ಜಂಟಿ ನಿರ್ದೇಶಕಿ ಮಂಜುಳಾ ಎಸ್., ಅಲೆವೂರು ಪಂಚಾಯತಿ ಅಧ್ಯಕ್ಷ ಯತೀಶ್ ಕುಮಾರ್, ಐ.ಎಂ.ಸಿ ಅಧ್ಯಕ್ಷ ವಿಶ್ವನಾಥ ಭಟ್, ಪಂಚಾಯತ್ ಸದಸ್ಯ ನಾಗರಾಜ್, ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಚಾರ್ಯ ಶಿವಕುಮಾರ್ ಎಸ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಪೂರ್ಣಿಮಾ ರಾವ್ ಕೆ ನಿರೂಪಿಸಿ, ಸಂಸ್ಥೆಯ ತರಬೇತಿ ಅಧಿಕಾರಿ ಭಾಸ್ಕರ್ ಎಂ.ಆರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!