Thursday, October 24, 2024
Thursday, October 24, 2024

ಗೆಲಾಕ್ಟಿಕ್ ಗಾಲಾ 2024

ಗೆಲಾಕ್ಟಿಕ್ ಗಾಲಾ 2024

Date:

ಕಟಪಾಡಿ, ಆ.30: ಪಾಜಕ ಶ್ರೀ ವಿಶ್ವೇಶತೀರ್ಥ ಮಹಾವಿದ್ಯಾಲಯ ಪದವಿ ಕಾಲೇಜಿನಲ್ಲಿ, ಉಡುಪಿ ಜಿಲ್ಲೆಯ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಗೆಲಾಕ್ಟಿಕ್ ಗಾಲಾ 2024 ಎಂಬ ವಿನೂತನ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೇಜಾವರ ಹಿರಿಯ ಶ್ರೀಗಳ ಕನಸಿನ ಶಾಲೆ, ಪೇಜಾವರ ಈಗಿನ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಆಶೀರ್ವಾದದಿಂದ ಇಂದು ಹೆಮ್ಮರವಾಗಿ ಬೆಳೆದಿದ್ದು, ಇಲ್ಲಿ ನರ್ಸರಿ ಇಂದ ಪದವಿವರೆಗೆ ಸುಮಾರು 3000 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ ಎಂಬುದೇ ಹೆಮ್ಮೆಯ ವಿಚಾರ, ಮಧ್ವಾಚಾರ್ಯರು ಜನಿಸಿದ ಈ ಪವಿತ್ರ ಭೂಮಿಯಲ್ಲಿ ಆನಂದತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಇದಕ್ಕೆ ಟ್ರಸ್ಟಿನ ಎಲ್ಲಾ ಸದಸ್ಯರು ಅವಿರತವಾಗಿ ಶ್ರಮಿಸುತ್ತಿರುವುದೇ ಕಾರಣ. ಜಿಲ್ಲೆಯ ಹತ್ತಾರು ಕಾಲೇಜಿನ ವಿದ್ಯಾರ್ಥಿಗಳನ್ನು ಇಲ್ಲಿ ಕರೆಸಿ ಎಲ್ಲಾ ವಿದ್ಯಾರ್ಥಿಗಳಿಗೂ ಸ್ಪರ್ಧೆ ನಡೆಸುವುದು ಅತ್ಯಂತ ಜವಾಬ್ದಾರಿಯುತವಾದ ಕೆಲಸ. ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಆಡಳಿತ ಮಂಡಳಿ ಕಾರ್ಯಧ್ಯಕ್ಷ ನಾಗರಾಜ್ ಬಲ್ಲಾಳ್, ಉಪಾಧ್ಯಕ್ಷ ಶ್ರೀ ಹರಿ ಭಟ್, ಖಜಾಂಚಿ ಲಕ್ಷ್ಮಿನಾರಾಯಣ ಉಪಾಧ್ಯ, ಸದಸ್ಯರಾದ ಸುದರ್ಶನ್ ರಾವ್, ರೂಪಾ ಬಲ್ಲಾಳ್, ಕಾಲೇಜು ಪ್ರಾಂಶುಪಾಲ ವಿಜಯ್ ಪಿ. ರಾವ್, ಶ್ರೀ ವಿಶ್ವೇಶತೀರ್ಥ ಪದವಿ ಕಾಲೇಜು ಸಂಯೋಜಕಿ ರಕ್ಷಿತಾ, ಆನಂದತೀರ್ಥ ವಿದ್ಯಾಲಯ ಪ್ರಿನ್ಸಿಪಲ್ ಡಾ. ಗೀತಾ ಶಶಿಧರ್, ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನಘಾ ಕಾರ್ಯಕ್ರಮ ನಿರೂಪಿಸಿ, ಶರಣ್ಯಾ ಸ್ವಾಗತಿಸಿ, ಸಿಂಚನಾ ವಂದಿಸಿದರು. ಶ್ರೇಯಾ ಜಿ. ಆರ್ ಮುಖ್ಯ ಅತಿಥಿಗಳ ಪರಿಚಯ ಮಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಿಕ್ಸ್: ಭಾರತ ಚೀನಾ ದ್ವಿಪಕ್ಷೀಯ ಸಭೆ

ಯು.ಬಿ.ಎನ್.ಡಿ., ಅ.23: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಚೀನಾ...

ರಾಣಿ ಚೆನ್ನಮ್ಮರ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ

ಉಡುಪಿ, ಅ.23: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ...

ಗ್ಲಿಸ್ಟನ್ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ...

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಉಡುಪಿ, ಅ.23: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭ...
error: Content is protected !!