Thursday, October 24, 2024
Thursday, October 24, 2024

ವಿದ್ಯಾರ್ಥಿಗಳನ್ನು ಅರಿತುಕೊಳ್ಳಿ: ಆನಂದ ಸಿ ಕುಂದರ್

ವಿದ್ಯಾರ್ಥಿಗಳನ್ನು ಅರಿತುಕೊಳ್ಳಿ: ಆನಂದ ಸಿ ಕುಂದರ್

Date:

ಮಣೂರು, ಆ.30: ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರ ನಡುವಿನ ಬಾಂಧವ್ಯವನ್ನು ವೃದ್ಧಿಗೊಳಿಸಲು ಪೋಷಕರ ಸಭೆಯು ಉತ್ತಮ ವೇದಿಕೆ. ಈ ಸಭೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಪೋಷಕರು ತಮ್ಮ ಮಕ್ಕಳನ್ನು ಚೆನ್ನಾಗಿ ಅರಿತುಕೊಳ್ಳಬಹುದು ಎಂದು ಮಣೂರು ಪಡುಕರೆಯ ಗೀತಾನಂದ ಟ್ರಸ್ಟ್‌ನ ಪ್ರವರ್ತಕರಾದ ಆನಂದ ಸಿ ಕುಂದರ್ ಪೋಷಕರಿಗೆ ಕಿವಿಮಾತು ಹೇಳಿದರು. ಮಣೂರು ಪಡುಕರೆಯ ಸರಕಾರಿ ಪದವಿಪೂರ್ವ ಕಾಲೇಜಿನ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾಲೇಜಿನ 25 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್‌ನ ವತಿಯಿಂದ ವಿದ್ಯಾರ್ಥಿವೇತನವನ್ನು ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ಗುರುತು ಪತ್ರಗಳನ್ನು ವಿತರಿಸಿದರು.

ಕಾಲೇಜಿಗೆ ವರ್ಗಾವಣೆಗೊಂಡು ಆಗಮಿಸಿದ ಉಪನ್ಯಾಸಕರಾದ ಕಿಶೋರ್, ಡಾ. ಸಹನಾ ಎಸ್. ಮತ್ತು ಮಮತಾ ಸುವರ್ಣ ಇವರನ್ನು ಸ್ವಾಗತಿಸಲಾಯಿತು. ನಿರ್ಗಮಿತ ಅತಿಥಿ ಉಪನ್ಯಾಸಕರನ್ನು ಗೀತಾನಂದ ಫೌಂಡೇಶನ್ ವತಿಯಿಂದ ಗೌರವಿಸಲಾಯಿತು. ಕಾಲೇಜು ಪ್ರಾಂಶುಪಾಲರಾದ ಡೆನ್ನಿಸ್ ಬಾಂಜಿ ಕೆ.‌ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಸುನೀತಾ, ಕಾಲೇಜು ಶೈಕ್ಷಣಿಕ ಸಮಿತಿಯ ಸದಸ್ಯರಾದ ನಾಗೇಶ್ ಶಾನುಭಾಗ್, ರಮೇಶ್ ಕುಂದರ್, ಜಯರಾಮ ಶೆಟ್ಟಿ, ಗುಲಾಬಿ ಬಂಗೇರ, ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮದಾಸ್ ನಾಯಕ್, ಗೀತಾನಂಧ ಫೌಂಡೇಶನ್‌ನ ಸಮಾಜಕಾರ್ಯ ವಿಭಾಗದ ಸಂಯೋಜಕ ರವಿಕಿರಣ್ ಕೋಟ ಹಾಗೂ ದೀಕ್ಷಿತಾ ಉಪಸ್ಥಿತರಿದ್ದರು. ಉಪನ್ಯಾಸಕ ಸತ್ಯನಾರಾಯಣ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಅಕ್ಷತಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಿಕ್ಸ್: ಭಾರತ ಚೀನಾ ದ್ವಿಪಕ್ಷೀಯ ಸಭೆ

ಯು.ಬಿ.ಎನ್.ಡಿ., ಅ.23: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಚೀನಾ...

ರಾಣಿ ಚೆನ್ನಮ್ಮರ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ

ಉಡುಪಿ, ಅ.23: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ...

ಗ್ಲಿಸ್ಟನ್ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ...

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಉಡುಪಿ, ಅ.23: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭ...
error: Content is protected !!