Monday, February 24, 2025
Monday, February 24, 2025

ನಚಿಕೇತ ವಿದ್ಯಾಲಯ: ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ನಚಿಕೇತ ವಿದ್ಯಾಲಯ: ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Date:

ಕಾರ್ಕಳ, ಆ.31: ಜನ್ಮಭೂಮಿ ಸೇವಾ ಟ್ರಸ್ಟ್ ನ ತಳಹದಿಯಲ್ಲಿರುವ ಕಾರ್ಕಳ ಬೈಲೂರಿನ ನಚಿಕೇತ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ನೀರೆ ಗ್ರಾಮ ಪಂಚಾಯಿತ್ ನಿಂದ ಶೋಭಾಯಾತ್ರೆ ಆರಂಭವಾಗಿ ಚೆಂಡೆ ನಾದದೊಂದಿಗೆ, ವಿದ್ಯಾರ್ಥಿಗಳಿಂದ ಕುಣಿತ ಭಜನೆ, ಮುದ್ದು ರಾಧೆ-ಕೃಷ್ಣ ರ ಮೆರವಣಿಗೆಯು ಶಾಲೆಯ ಮೈದಾನದನದಲ್ಲಿ ಸಮಾಪನಗೊಂಡು ಮೊಸರು ಕುಡಿಕೆ ನಡೆಯಿತು. ಮುಖ್ಯ ಅತಿಥಿಗಳಾಗಿ ಸಿವಿಲ್ ಕಂಟ್ರಾಕ್ಟರ್ ಅರುಣ್ ಕುಮಾರ್ ನಿಟ್ಟೆ ಆಗಮಿಸಿದ್ದರು. ಎಂಪಿಎಂಸಿ ಕಾಲೇಜಿನ ಉಪನ್ಯಾಸಕಿ ಅಕ್ಷತಾ ರಾವ್ ಹಾಗೂ ಉದ್ಯಮಿ ಗಣೇಶ್ ಕೌಡೂರು, ಸಂಸ್ಥೆಯ ಪಿಟಿಎ ಅಧ್ಯಕ್ಷ ನಿತಿನ್ ಕುಮಾರ್, ಮಾತೃಭಾರತಿ ಅಧ್ಯಕ್ಷೆ ದೀಕ್ಷಿತಾ ರಾವ್, ಶಾಲಾ ಸಂಚಾಲಕ ಡಿ. ಮಚ್ಚೆಂದ್ರನಾಥ್, ಸಂಸ್ಥೆಯ ಮುಖ್ಯೋಪಾಧ್ಯಾಯನಿ ಕವಿತಾ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಮುದ್ದು ಕೃಷ್ಣ ಮುದ್ದು ರಾಧೆ ಛದ್ಮವೇಷ ಸ್ಪರ್ಧೆ ನಡೆಯಿತು. ಯಕ್ಷಗಾನ ಗುರುಗಳಾದ ಸುಬ್ರಹ್ಮಣ್ಯ ಪ್ರಸಾದ್, ಅಕ್ಷತಾ ರಾವ್, ಕುಣಿತ ಭಜನೆಯ ಗುರುಗಳಾದ ಗುರುರಾಜ್ ಆಚಾರ್ಯ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ವಿದ್ಯಾರ್ಥಿಗಳ ಕಬಡ್ಡಿ ತಂಡವು ರಾಜ್ಯಮಟ್ಟದಲ್ಲಿ ಪ್ರತಿನಿಧಿಸುವಂತೆ ತರಬೇತಿ ನೀಡಿದ ಸೃಜನ್ ಹಾಗೂ ಗಣೇಶ್, ಹಾಗೆಯೇ ಕುಣಿತ ಭಜನೆಗಯ ಗುರುಗಳಾದ ಗುರುರಾಜ್ ಆಚಾರ್ಯ ಇವರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!