Wednesday, October 23, 2024
Wednesday, October 23, 2024

ತಲ್ಲಂಜೆ: ಮುದ್ದು ಕೃಷ್ಣ, ಮುದ್ದು ರಾಧೆ ಸ್ಪರ್ಧೆ

ತಲ್ಲಂಜೆ: ಮುದ್ದು ಕೃಷ್ಣ, ಮುದ್ದು ರಾಧೆ ಸ್ಪರ್ಧೆ

Date:

ಶಂಕರನಾರಾಯಣ, ಸೆ.2: ಶ್ರೀ ಪಾತಾಳ ದುರ್ಗಾಪರಮೇಶ್ವರಿ ದೇವಸ್ಥಾನ ತಲ್ಲಂಜೆ ಹಾಗೂ ಸಮೃದ್ಧಿ ಯುವಕ ಮಂಡಲ (ರಿ) ಕುಳ್ಳಂಜೆ ಶಂಕರನಾರಾಯಣ ಇವರ ಸಹಯೋಗದೊಂದಿಗೆ ಮುದ್ದು ಕೃಷ್ಣ ಮುದ್ದು ರಾಧೆ ಸ್ಪರ್ಧಾ ಕಾರ್ಯಕ್ರಮ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಮೂರ್ತಿ ಸೂರ್ಯನಾರಾಯಣ ಬಾಯರಿಯವರು ವಹಿಸಿ ವಿಜೇತ ಪುಟಾಣಿಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ 50 ಕ್ಕೂ ಅಧಿಕ ಪುಟಾಣಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜೆಸಿಐ ಶಂಕರನಾರಾಯಣದ ಪೂರ್ವದ್ಯಕ್ಷ ರತೀಶ ಕನ್ನಂತ ಉಪಸ್ಥಿತರಿದ್ದು ಗ್ರಾಮೀಣ ಪ್ರದೇಶದಲ್ಲಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ಸಾಗಲಿ ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಭಾಗವಹಿಸಲು ಸುವರ್ಣಾವಕಾಶ ಎಂದರು.

ವೇದಿಕೆಯಲ್ಲಿ ಸುಬ್ರಾಯ ಶೇಟ್ ತಲ್ಲಂಜೆ, ಸಮೃದ್ಧಿ ಯುವಕ ಮಂಡಲದ ಅಧ್ಯಕ್ಷ ನಾರಾಯಣ ಟಿ., ಕಾರ್ಯದರ್ಶಿ ಭರತ್ ತಲ್ಲಂಜೆ, ದೇವಸ್ಥಾನದ ಸಮಿತಿಯ ಕಾರ್ಯದರ್ಶಿ ಗಣೇಶ ತಲ್ಲಂಜೆ, ಭಜನಾ ಸಮಿತಿಯ ಮುಖ್ಯಸ್ಥರಾದ ನರಸಿಂಹ ನಾಯ್ಕ ಬಾಳೆಕೊಡ್ಲು ಉಪಸ್ಥಿತರಿದ್ದರು. ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಹೆಗ್ಗುಂಜೆ ರಾಜೀವ ಶೆಟ್ಟಿ ಪದವಿಪೂರ್ವ ಕಾಲೇಜು ಹಾಲಾಡಿ, ಇದರ ಪ್ರೌಢಶಾಲಾ ವಿಭಾಗದ ಶಿಕ್ಷಕರಾದ ನಾಗೇಂದ್ರ ರವರು ಬಾಗವಹಿಸಿ ತಮ್ಮ ಅನಿಸಿಕಯನ್ನು ಹಂಚಿಕೊಂಡರು. ವಿ.ಕೆ.ಆರ್ ಆಂಗ್ಲ ಮಾದ್ಯಮ ಶಾಲೆ ಕುಂದಾಪುರದ ಶಿಕ್ಷಕ ಕೆ. ಪರಮೇಶ್ವರ ಉಡುಪ, ಪೂರ್ಣಿಮ ಉದಯ ರಾವ್, ತೀರ್ಪುಗಾರರಾಗಿ ಸಹಕರಿಸಿದ್ದರು.

ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಸದಸ್ಯರು ಭಜನಾ ಸಮಿತಿಯ ಸದಸ್ಯರು ಸಮೃದ್ಧಿ ಯುವಕ ಮಂಡಲದ ಪದಾಧಿಕಾರಿಗಳು ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು ನಾರಾಯಣ ಟಿ ಸ್ವಾಗತಿಸಿ, ಹೆಬ್ಬಾಡಿ ರಾಘವೇಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗಣೇಶ ತಲ್ಲಂಜೆ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!