Thursday, October 24, 2024
Thursday, October 24, 2024

ಆತ್ಮಜ್ಞಾನ ಉತ್ತಮಗೊಳಿಸುವಲ್ಲಿ ಸಂಸ್ಕೃತಿ ಪ್ರಮುಖ ಪಾತ್ರ ವಹಿಸುತ್ತದೆ: ಪಾಂಡುರಂಗ ಪೈ

ಆತ್ಮಜ್ಞಾನ ಉತ್ತಮಗೊಳಿಸುವಲ್ಲಿ ಸಂಸ್ಕೃತಿ ಪ್ರಮುಖ ಪಾತ್ರ ವಹಿಸುತ್ತದೆ: ಪಾಂಡುರಂಗ ಪೈ

Date:

ಕುಂದಾಪುರ, ಸೆ.4: ಸ್ಪರ್ಧಾತ್ಮಕ ಯಗದಲ್ಲಿ ಕೇವಲ ಓದು ಬರಹ ಪುಸ್ತಕಗಳಲ್ಲಿ ಕಳೆದುಹೋಗಿ ತಮ್ಮ ಸುಪ್ತ ಪ್ರತಿಭೆಯನ್ನು ಹೊರಸೂಸಲು ಸಮಯ ಇಲ್ಲದಂತಾದ ಸಮಯದಲ್ಲಿ ಇಂತಹ ‌ ಮೇಳಗಳು ಮಕ್ಕಳನ್ನು ಉತ್ತೇಜಿಸಲು ಸಹಕಾರಿಯಾಗಿದೆ ಎಂದು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಪಾಂಡುರಂಗ ಪೈ ಅಭಿಪ್ರಾಯಪಟ್ಟರು. ಅವರು ಡ್ಯುಯಲ್ ಸ್ಟಾರ್ ಶಾಲೆ ಅಮಾಸೆಬೈಲು ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ವಿಜ್ಞಾನ, ಗಣಿತ, ವೇದಗಣಿತ ಮತ್ತು ಸಂಸ್ಕೃತಿ ಜ್ಞಾನ ಮಹೋತ್ಸವ -2024 ರ ಅಧ್ಯಕ್ಷತೆ ವಹಿಸಿ ಮಕ್ಕಳ ಆತ್ಮ ಜ್ಞಾನವನ್ನು ಉತ್ತಮಗೊಳಿಸುವಲ್ಲಿ -ವಿಜ್ಞಾನ ಗಣಿತ-ವೇದಗಣಿತ-ಸಂಸ್ಕೃತಿ ಜ್ಞಾನದ ಪಾತ್ರ ಹಿರಿದು ಎಂದರು.

ವೇದಿಕೆಯಲ್ಲಿ ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ರಘುಪತಿ ಭಟ್ ಗೆಣಸಿನಕುಣಿ, ಶಾಲಾ ಪ್ರಾಂಶುಪಾಲ ಪ್ರಕಾಶ್ ಆಚಾರ್ಯ ವಡ್ದರ್ಸೆ, ವಿಭಾಕ್ ಉಡುಪಿ ಜಿಲ್ಲೆಯ ಕಾರ್ಯದರ್ಶಿ ಮಹೇಶ್ ಹೈಕಾಡಿ, ಶಾಲೆ ಉಪಾಧ್ಯಕ್ಷರಾದ ಸಚ್ಚಿದಾನಂದ ಅಡಿಗ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಗಾಯಿತ್ರಿ ಅಡಿಗ, ಜಿಲ್ಲಾ ವಿಜ್ಞಾನ ಪ್ರಮುಖ್ ಸಂಧ್ಯಾ ಭಟ್, ಜಿಲ್ಲಾ ಗಣಿತ ಪ್ರಮುಖ ಜ್ಯೋತಿ ಅಡಿಗ, ಜಿಲ್ಲಾ ಸಂಸ್ಕೃತಿ ಜ್ಞಾನ ಪ್ರಮುಖ ಜ್ಯೋತಿ ಎಳ್ಳಾರೆ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರಾಧಿಕಾ ರಾವ್, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಅಮಿತಾ, ಪೂರ್ವ ಪ್ರಾಥಮಿಕ ವಿಭಾಗದ ಸೌಮ್ಯ, ವಿದ್ಯಾರ್ಥಿ ತಂಡದ ನಾಯಕ ಮೋಹಿದ್, ಟ್ರಾನ್ಸ್ಪೋರ್ಟ್ ಮ್ಯಾನೇಜರ್ ರಮಾಕಾಂತ್, ವಿಜ್ಞಾನ ಶಿಕ್ಷಕಿ ಅಮೃತಾ ಉಪಸ್ಥಿತರಿದ್ದರು.

ರಾಧಿಕ ರಾವ್ ಸ್ವಾಗತಿಸಿ, ಜಿಲ್ಲಾ ವಿಜ್ಞಾನ ಪ್ರಮುಖ ಸಂಧ್ಯಾ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಯೋತಿ ಎಳ್ಳಾರೆ ವಂದಿಸಿದರು. ಶಿಕ್ಷಕ ವಿಘ್ನೇಶ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಿಕ್ಸ್: ಭಾರತ ಚೀನಾ ದ್ವಿಪಕ್ಷೀಯ ಸಭೆ

ಯು.ಬಿ.ಎನ್.ಡಿ., ಅ.23: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಚೀನಾ...

ರಾಣಿ ಚೆನ್ನಮ್ಮರ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ

ಉಡುಪಿ, ಅ.23: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ...

ಗ್ಲಿಸ್ಟನ್ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ...

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಉಡುಪಿ, ಅ.23: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭ...
error: Content is protected !!