Thursday, October 24, 2024
Thursday, October 24, 2024

ಸತತ ಪರಿಶ್ರಮ ವಿದ್ಯಾರ್ಥಿಗಳ ಬದುಕು ಪರಿಪೂರ್ಣವಾಗಲು ಅಗತ್ಯ: ಸಂಪತ್ ಶೆಟ್ಟಿ

ಸತತ ಪರಿಶ್ರಮ ವಿದ್ಯಾರ್ಥಿಗಳ ಬದುಕು ಪರಿಪೂರ್ಣವಾಗಲು ಅಗತ್ಯ: ಸಂಪತ್ ಶೆಟ್ಟಿ

Date:

ಕುಂದಾಪುರ, ಸೆ.4: ಉತ್ತಮವಾದ ಆಯ್ಕೆ ಒಳ್ಳೆಯ ಉದ್ಧೇಶ, ಆತ್ಮವಿಶ್ವಾಸ, ಪೂರ್ವ ತಯಾರಿ, ಸತತ ಪರಿಶ್ರಮಗಳು ವಿದ್ಯಾರ್ಥಿಗಳ ಬದುಕು ಪರಿಪೂರ್ಣವಾಗಲು ಅಗತ್ಯ. ಒಳ್ಳೆಯ ಪುಸ್ತಕದ ಓದು ಜೀವನವನ್ನು ಹೇಗೆ ನಿಭಾಯಿಸಬೇಕೆಂಬುವುದನ್ನು ಕಲಿಸುತ್ತದೆ. ಹಾಗಾಗಿ ಒಳ್ಳೆಯ ಪುಸ್ತಕ ಹಾಕಿಕೊಟ್ಟ ಹಾದಿಯಲ್ಲಿ ಬದುಕುವಂತಾದಾಗ ಅದು ಇತರರಿಗೆ ಮಾದರಿಯಾಗುತ್ತದೆ ಎಂದು ಶ್ರೀ ಕೃಷ್ಣಪ್ರಸಾದ್ ಇಂಡಸ್ಟ್ರೀಸ್‌ನ ಮಾಲಕ ಸಂಪತ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾಲೇಜಿನ ಕಾರ್ಯಕ್ರಮಗಳಿಗೆ ಹೇಗೆ ಸ್ಪಂಧಿಸುತ್ತದೆ ಎಂಬುವುದನ್ನು ತಿಳಿಸಿದರು. ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಅತಿಥಿಗಳನ್ನು ಪರಿಚಯಿಸಿ, ರೇಷ್ಮಾ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿನಾಯಕ್ ಎನ್. ಅಡಿಗ ಪ್ರತಿಜ್ಞಾ ವಿಧಿ ಬೋಧಿಸಿ, ಎಸ್‌ಕ್ಯೂಎಸಿ ಪ್ರತಿನಿಧಿ ಶ್ರದ್ಧಾ ಆರ್. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯವೈಖರಿಯನ್ನು ಪರಿಚಯಿಸಿದರು. ವಾಣಿಜ್ಯ ಸಹಾಯಕ ಪ್ರಾಧ್ಯಾಪಕರಾದ ಯೋಗೀಶ್ ಶ್ಯಾನುಭೋಗ್ ವಂದಿಸಿ, ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಸ್ಟಾಲಿನ್ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಿಕ್ಸ್: ಭಾರತ ಚೀನಾ ದ್ವಿಪಕ್ಷೀಯ ಸಭೆ

ಯು.ಬಿ.ಎನ್.ಡಿ., ಅ.23: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಚೀನಾ...

ರಾಣಿ ಚೆನ್ನಮ್ಮರ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ

ಉಡುಪಿ, ಅ.23: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ...

ಗ್ಲಿಸ್ಟನ್ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ...

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಉಡುಪಿ, ಅ.23: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭ...
error: Content is protected !!