Thursday, September 19, 2024
Thursday, September 19, 2024

ವಿದ್ಯಾರ್ಥಿಗಳಲ್ಲಿ ಅಪರಿಮಿತ ಶಕ್ತಿ ಅಡಗಿದೆ: ರವಿಶಂಕರ್ ರಾವ್ ಕುಂದಾರು

ವಿದ್ಯಾರ್ಥಿಗಳಲ್ಲಿ ಅಪರಿಮಿತ ಶಕ್ತಿ ಅಡಗಿದೆ: ರವಿಶಂಕರ್ ರಾವ್ ಕುಂದಾರು

Date:

ಉಡುಪಿ, ಸೆ.5: ಪ್ರಾಥಮಿಕ ಶಾಲೆಯ ಶಿಕ್ಷಕರುಗಳು ನಮ್ಮ ಮನಃಪಟಲದಲ್ಲಿ ಸದಾ ಕಾಲ ನೆಲೆಸಿರುತ್ತಾರೆ. ಶಿಕ್ಷಕರುಗಳು ವಿದ್ಯಾರ್ಥಿಗಳ ಪಾಲಿಗೆ ಮಾದರಿ ವ್ಯಕ್ತಿತ್ವಗಳಾಗಬೇಕು ಆಗ ಮಾತ್ರ ಅವರನ್ನು ತಿದ್ದಿ ತೀಡಲು ಸಾಧ್ಯವಾಗುವುದು. ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ ಅದನ್ನು ಗುರುತಿಸುವ ಶ್ರೇಷ್ಠ ಕಾರ್ಯ ಶಿಕ್ಷಕರದ್ದು. ಸಾಮಾನ್ಯ ಕೆಲಸಗಾರರಿಗಿರುವ ಧೈರ್ಯ ನಮ್ಮ ವಿದ್ಯಾರ್ಥಿಗಳಿಗೂ ಬರಬೇಕು. ಆಗ ಮಾತ್ರ ಅವರ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನಿವೃತ್ತರಾಗಿರುವ ರವಿಶಂಕರ್ ರಾವ್ ಕುಂದಾರು ಹೇಳಿದರು. ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ನಿವೃತ್ತ ಶಿಕ್ಷಕರುಗಳನ್ನು ಸನ್ಮಾನಿಸಿ ಮಾತನಾಡಿದರು.

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಮತ್ತು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವತಿಯಿಂದ ಭಾಸ್ಕರ್ ಡಿ ಸುವರ್ಣ ನಿವೃತ್ತ ಮುಖ್ಯೋಪಾಧ್ಯಾಯರು ನಿಟ್ಟೂರು ಪ್ರೌಢಶಾಲೆ ಉಡುಪಿ, ದಯಾವತಿ ನಿವೃತ್ತ ಮುಖ್ಯ ಶಿಕ್ಷಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜೂರು, ಐರಿನ್ ಮೆನೆಜಸ್ ನಿವೃತ್ತ ಮುಖ್ಯ ಶಿಕ್ಷಕಿ ಎಲ್.ವಿ.ಪಿ. ಹಿರಿಯ ಪ್ರಾಥಮಿಕ ಶಾಲೆ ಪುತ್ತೂರು ಉಡುಪಿ, ರಾಮಕೃಷ್ಣ ಪ್ರಭು ನಿವೃತ್ತ ಮುಖ್ಯೋಪಾಧ್ಯಾಯರು ಶ್ರೀ ವಿಷ್ಣುಮೂರ್ತಿ ಪ್ರೌಢ ಶಾಲೆ ಕುದಿ, ವಾಸು ಪ್ರಭು ನಿವೃತ್ತ ಮುಖ್ಯೋಪಾಧ್ಯಾಯರು ಪರ್ಕಳ ಪ್ರೌಢಶಾಲೆ ಇವರನ್ನು ಗೌರವಿಸಲಾಯಿತು.

ಚೆಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಿಖಿಲ್ ವಿಕ್ರಮ್ ಕೆ ಎಸ್ ಮತ್ತು ಮಿಥಾಲಿ ಶೆಟ್ಟಿ ಹಾಗೂ ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ವತ್ ವಿ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು. ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ವಂದಿಸಿ, ಉಪನ್ಯಾಸಕಿ ಪವಿತ್ರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!