Thursday, September 19, 2024
Thursday, September 19, 2024

ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಟೂರ್ನಮೆಂಟ್- ಬ್ಲೇಸರ್ ತಂಡಕ್ಕೆ ಪ್ರಶಸ್ತಿ

ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಟೂರ್ನಮೆಂಟ್- ಬ್ಲೇಸರ್ ತಂಡಕ್ಕೆ ಪ್ರಶಸ್ತಿ

Date:

ಉಡುಪಿ, ಸೆ.5: ಮಾರ್ನಿಂಗ್ ಶೆಟಲ್ ಫ್ರೆಂಡ್ಸ್, ಅಜ್ಜರಕಾಡು ಆಯೋಜಿಸಿದ್ದ ಶಟಲ್ ಬ್ಯಾಡ್ಮಿಂಟನ್ ಲೀಗ್ ಪಂದ್ಯಾಟ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಡಾ. ರೋಷನ್ ಶೆಟ್ಟಿ ನೆರವೇರಿಸಿ ಮಾತನಾಡುತ್ತಾ, ಉಡುಪಿಯ ಅಜ್ಜರಕಾಡು ಪರಿಸರವು ಕ್ರೀಡಾ ಹಬ್ ಆಗಿದ್ದು ಸರಕಾರದಿಂದ ಬಹಳಷ್ಟು ಅನುದಾನಗಳು ಕಾಲಕಾಲಕ್ಕೆ ಬಂದಿರುತ್ತದೆ. ಸುಸಜ್ಜಿತ ಸ್ಪೋರ್ಟ್ಸ್ ಮತ್ತು ಸೈನ್ಸ್ ನ ಸೆಂಟರ್ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಬಿಟ್ಟರೆ ಉಡುಪಿಯ ಅಜ್ಜರಕಾಡು ಸ್ಟೇಡಿಯಂನಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿದೆ, ಮುಂದಿನ ದಿನಗಳಲ್ಲಿ ಸುಮಾರು 10 ಕೋಟಿ ವೆಚ್ಚದಲ್ಲಿ ಮಲ್ಟಿ ಪರ್ಪಸ್ ಒಳಾಂಗಣ ಕ್ರೀಡಾ ಕಾಪ್ಲೆಕ್ಸ್ ನಿರ್ಮಾಣಕ್ಕಾಗಿ ಖೇಲೊ ಇಂಡಿಯಾದ ಅಡಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಅನುದಾನಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ರಾಜ್ಯ ಬಿಜೆಪಿ ಮುಖಂಡ ಉದಯ್ ಕುಮಾರ್ ಶೆಟ್ಟಿ, ಪ್ರಾಧ್ಯಾಪಕ ಬಿ ಎಂ ಹೆಗಡೆ, ಪುಟ್ಟರಾಜ್, ಹರೀಶ್ ಶೆಟ್ಟಿ, ಡಾ. ಭಾಸ್ಕರ್ ಎಂ. ಎನ್., ಡಾ. ಉದಯಕುಮಾರ್ ಶೆಟ್ಟಿ, ದೇವರಾಜ್, ಅಭಿಜಿತ್ ಕೋಟ್ಯಾನ್ ಭಾಗವಹಿಸಿದ್ದರು. ಪಂದ್ಯಾಟದಲ್ಲಿ ಒಟ್ಟು ನಾಲ್ಕು ತಂಡಗಳ 40 ಆಟಗಾರರು ಭಾಗವಹಿಸಿದ್ದರು. ಪಂದ್ಯಕೂಟದಲ್ಲಿ ವಿಜೇತರಾಗಿ ರೋಹಿತ್ ಶೆಟ್ಟಿಯವರ ನಾಯಕತ್ವದ ಟೀಂ ಬ್ಲೇಸರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ರನ್ನರ್ಸ್ ಟ್ರೋಫಿ ಪ್ರಶಸ್ತಿಯನ್ನು ಅಮಿತ್ ಪಡುಕೋಣೆ ನಾಯಕತ್ವದ ಟೀಂ ಅಲ್ಪಾ ಪಡೆದುಕೊಂಡಿತು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್ ಟಿ ಸಿದ್ದಲಿಂಗಪ್ಪ ಎಡಿಷನಲ್ ಸೂಪರ್ಡೆಂಟ್ ಆಫ್ ಪೊಲೀಸ್ ಉಡುಪಿ ಇವರು ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಿ ಮಾತನಾಡುತ್ತಾ ಉಡುಪಿಯ ಅಜ್ಜರಕಾಡು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ಒಳ್ಳೆಯ ಕೋಚಿಂಗ್ ವ್ಯವಸ್ಥೆ ಇದ್ದು ಕೋಚಿಂಗ್ ನಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಕ್ರೀಡಾಕೂಟವನ್ನು ಆಯೋಜಿಸುವುದರಿಂದ ಅವರಿಗೂ ಪ್ರಯೋಜನವಾಗುತ್ತದೆ ಎಂದರು. ಕಾಶಿರಾಮ್ ಪೈ, ಸುಹೇಲ್ ಅಮೀನ್, ಡಾ. ಅತುಲ್ ಭಾಗವಹಿಸಿದ್ದರು. ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ಬಿನ ಸದಸ್ಯರಾದ ಗಣೇಶ್ ಮಟ್ಟು ಮತ್ತು ಅಮಿತ್ ಪಡುಕೋಣೆ ಪಂದ್ಯಾಕೂಟವನ್ನು ನೆರವೇರಿಸಿದರು. ಉದಯ್ ಪಾಪ್ಯುಲರ್ ಪ್ರಾರ್ಥನೆ ನೆರವೇರಿಸಿದರು. ನಂದಕಿಶೋರ್ ಕೆಮ್ಮಣ್ಣು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!